ನಳಿನ್ ಕಟೀಲ್ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದ ಭಾಸ್ಕರ್ ರಾವ್
Team Udayavani, Mar 1, 2023, 11:39 AM IST
ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.
ಬಳಿಕ ಮಾತನಾಡಿದ ಅವರು, ನಾನು ಬಿಜೆಪಿಗೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಭಾವಿಸುತ್ತೇನೆ. ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ದೊಡ್ಡದಾಗಿ ಬೆಳೆಯಲ್ಲ. ಅವರು ಒಂದು ಕೂಟದ ಕೈಯಲ್ಲಿದ್ದಾರೆ, ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ. ಪಕ್ಷದಲ್ಲಿ ಸ್ಪಷ್ಟತೆ ಇಲ್ಲ ಎಂದರು.
ಇದನ್ನೂ ಓದಿ:ಮುಕೇಶ್ ಅಂಬಾನಿ ಮತ್ತು ಕುಟುಂಬಕ್ಕೆ ದೇಶ, ವಿದೇಶದಲ್ಲೂ ಝಡ್ ಪ್ಲಸ್ ಭದ್ರತೆ ನೀಡಿ: ಸುಪ್ರೀಂ
ಪೃಥ್ವಿ ರೆಡ್ಡಿ ಆಪ್ ರಾಜ್ಯಾಧ್ಯಕ್ಷರಾಗಿ ಮುಂದುವರಿದ ಬಳಿಕ ಪಕ್ಷದ ಚಟುವಟಿಕೆಗಳಿಂದ ತುಸು ದೂರವಾಗಿದ್ದ ಭಾಸ್ಕರ್ ರಾವ್, ಚುನಾವಣ ಹೊಸ್ತಿಲಲ್ಲಿ ಬಿಜೆಪಿ ಸೇರುತ್ತಿದ್ದಾರೆ.
Former Police Commissioner of Bengaluru and AAP Leader Bhaskar Rao Joins BJP in Presence of BJP State President Naleen Kumar Kateel… @Nimmabhaskar22 @BJP4Karnataka pic.twitter.com/c3C24E9eft
— Yasir Mushtaq (@path2shah) March 1, 2023
ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್ ಕೆ. ಅಣ್ಣಾಮಲೈ ಅವರು ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್ ರಾವ್ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ