ರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ರಾಜ್ಯ ಸರಕಾರದ ತುಷ್ಟೀಕರಣ ನೀತಿ ತಂದಿಟ್ಟ ಸಂಕಷ್ಟ; ಸರಕಾರ ವಜಾ ಮಾಡಬೇಕು: ಅಶ್ವತ್ಥ ನಾರಾಯಣ

Team Udayavani, May 26, 2024, 6:41 AM IST

bjpರಾಜ್ಯದಲ್ಲಿ ಬಿಹಾರದ ಲಾಲು ಮಾದರಿ ಆಡಳಿತ: ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಉಡುಪಿಯಲ್ಲಿ ನಡೆದ ರೌಡಿಗಳ ಗ್ಯಾಂಗ್‌ ವಾರ್‌, ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಯ ಮೇಲೆ ನಡೆದ ದಾಳಿಯನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ನಾಯಕರು ಆಡಳಿತ ಪಕ್ಷ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರು ತತ್‌ಕ್ಷಣ ವರದಿ ಪಡೆದು ಕ್ರಮ ಕೈಗೊಳ್ಳಲಿ.ಡಿ.ಜೆ. ಹಳ್ಳಿ, ಉಡುಪಿಯಲ್ಲಿ ಸಮಾಜ ವಿರೋಧಿ ಶಕ್ತಿಗಳು ಗಲಭೆ ನಡೆಸಿದ್ದವು. ಈಗ ದಾವಣಗೆರೆ ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಚನ್ನಗಿರಿ ಘಟನೆ ನೋಡಿದರೆ ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಯೋಚಿಸುವಂತಾಗಿದೆ. ಲಾಲು ಪ್ರಸಾದ್‌ ನೇತೃತ್ವದ ಸರಕಾರ ಇದ್ದಾಗ ಬಿಹಾರದಲ್ಲಿದ್ದ ಪರಿಸ್ಥಿತಿಯನ್ನು ನೆನಪಿಗೆ ತರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರಕಾರ ಅಲ್ಪಸಂಖ್ಯಾಕರ ತುಷ್ಟೀಕರಣ ನಡೆಸಿದ್ದರ ಫ‌ಲ ಇದು. ಗೃಹ ಸಚಿವರು ಏನು ಮಾಡುತ್ತಿದ್ದಾರೆ, ಸರಕಾರ ಯಾವಾಗ ಎಚ್ಚತ್ತುಕೊಳ್ಳಲಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಪೊಲೀಸ್‌ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್‌ ಸರಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್‌ಗ‌ಳು ವಿಜೃಂಭಿಸುವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫ‌ಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ದೂರಿದ್ದಾರೆ. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ಪಾಪದ ಕೊಡ ತುಂಬಿದೆ. ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್‌ ಸರಕಾರವನ್ನು ವಜಾ ಮಾಡಿ ಎಂದು ಮಾಜಿ ಡಿಸಿಎಂ ಡಾ| ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.

ಉಡುಪಿ-ಮಣಿಪಾಲದಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್‌ ವಾರ್‌ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್‌ಗ‌ಳಿಗೆ ಆಳುವ ಸರಕಾರದ ಕಾನೂನಿನ ಭಯ ಇಲ್ಲವಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫ‌ಲ್ಯಕ್ಕೆ ಹಿಡಿದ ಕೈಗನ್ನಡಿ.
– ವಿ. ಸುನಿಲ್‌ ಕುಮಾರ್‌,
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಜನ ಅಧಿಕಾರ ಕೊಟ್ಟರೂ ಆಡಳಿತ ನಡೆಸುವಲ್ಲಿ ಕಾಂಗ್ರೆಸ್‌ ಸಂಪೂರ್ಣ ವಿಫ‌ಲವಾಗಿದೆ. ಕಾಂಗ್ರೆಸ್‌ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಆಗ್ರಹಿಸುತ್ತೇವೆ. ಇವರ ಪಾಪದ ಕೊಡ ತುಂಬಿದೆ.
– ಡಾ| ಅಶ್ವತ್ಥನಾರಾಯಣ, ಮಾಜಿ ಡಿಸಿಎಂ

ಡಿ.ಜೆ. ಹಳ್ಳಿ, ಉಡುಪಿ ಘಟನೆ ಬಳಿಕ ಚೆನ್ನಗಿರಿಯಲ್ಲಿ ಪೊಲೀಸ್‌ ಠಾಣೆಗಳಿಗೆ ನುಗ್ಗಿ ಧ್ವಂಸಗೊಳಿಸುವ ಮಟ್ಟಿಗೆ ಮೂಲಭೂತವಾದಿ ಶಕ್ತಿಗಳು ಸಂಘಟಿತವಾಗಿವೆ ಎಂದರೆ ನಾವು ಎಲ್ಲಿದ್ದೇವೆ? ಲಾಲು ನೇತೃತ್ವದ ಬಿಹಾರವನ್ನು ನೆನಪಿಸುವಂತೆ ಮಾಡಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ವರದಿ ಪಡೆಯಲಿ.
– ಬಿ.ವೈ. ವಿಜಯೇಂದ್ರ,
ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.