ಬೈಕ್ ತಡವಾಗಿ ಹಿಂದಿರುಗಿಸಿದ್ದಕ್ಕಾಗಿ ಸ್ನೇಹಿತನಿಗೆ ಚೂರಿ ಇರಿತ: ಯುವಕ ಸಾವು
Team Udayavani, Sep 22, 2022, 8:09 PM IST
ಕನಕಗಿರಿ: ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಪಟ್ಟಿದ್ದ ರವಿ (40) ಸಾವನ್ನಪ್ಪಿದ ಘಟನೆ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ.
ಇದನ್ನೂ ಓದಿ: ಮಣಿಪಾಲದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ವಶಕ್ಕೆ
ರವಿ ಹಾಗೂ ಮುತ್ತುರಾಜ ಎಂಬ ಇಬ್ಬರು ಯುವಕರು ಆತ್ಮೀಯ ಗೆಳೆಯರಾಗಿದ್ದರು. ಎರಡು ದಿನದ ಹಿಂದೆ ರವಿಯ ಬೈಕ್ನ್ನು ಗೆಳೆಯ ಮುತ್ತುರಾಜ ತೆಗೆದುಕೊಂಡು ಹೋಗಿ ತಡವಾಗಿ ಬಂದಿದ್ದ. ರವಿಯು ಬೈಕನ್ನು ತಡವಾಗಿ ಏಕೆ ತಂದಿರುವೆ’ ಎಂದು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಯುವಕ ಮುತ್ತುರಾಜನಿಗೆ ಚಾಕುವಿನಿಂದ ತನ್ನ ಗೆಳೆಯನಿಗೆ ಇರಿದಿದ್ದ.
ಈ ಸುದ್ದಿ ತಿಳಿದ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಮತ್ತೆ ಹೆಚ್ಚುವರಿ ಚಿಕಿತ್ಸೆ ಕೊಡಿಸಲು ವೈದ್ಯರು ಧಾರವಾಡ ಎಸ್ ಡಿ ಎಂ ಸಿ ಯಲ್ಲಿ ಚಿಕಿತ್ಸೆ ನೀಡುವಂತೆ ಹೇಳಿದ್ದರು. ಈ ವೇಳೆ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಆರೋಪಿ ಮುತ್ತುರಾಜನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ