“ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕೀಯ’
Team Udayavani, Aug 20, 2019, 3:07 AM IST
ಹಾಸನ: “ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಜೆಡಿಎಸ್ ಮತ್ತು ದೇವೇಗೌಡರ ಕುಟುಂಬವನ್ನು ಮುಗಿಸುವ ಹುನ್ನಾರ ನಡೆದಿದೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.
“ಸಿದ್ದರಾಮಯ್ಯ ಒತ್ತಾಯ ಮಾಡಿದ್ದಕ್ಕೆ ಟೆಲಿಫೋನ್ ಕದ್ದಾಲಿಕೆ ಆರೋಪವನ್ನು ಸಿಎಂ ಯಡಿ ಯೂರಪ್ಪ ಸಿಬಿಐ ತನಿಖೆಗೆ ವಹಿಸುವ ನಿರ್ಧಾರ ಮಾಡಿದ ರಂತೆ. ಇದನ್ನು ಯಡಿಯೂರಪ್ಪ ಅವರೇ ಬಹಿರಂಗವಾಗಿ ಹೇಳುತ್ತಾರೆಂದರೆ ಬಿಜೆಪಿ -ಕಾಂಗ್ರೆಸ್ ಎಂತಹ ಹೊಂದಾಣಿಕೆ ರಾಜಕೀಯ ಮಾಡು ತ್ತಿವೆ ಎಂಬುದು ಗೊತ್ತಾಗುವುದಿಲ್ಲವೇ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಪ್ರಶ್ನಿಸಿದರು.
“ಏನೇ ಕುತಂತ್ರ ರಾಜಕಾರಣ ಮಾಡಿ ದರೂ ದೇವೇಗೌಡರ ಕುಟುಂಬವನ್ನು ಹೆದರಿ ಸಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರಿಗೆ ಧೈರ್ಯವಿದ್ದರೆ 2008 ರಿಂದ 2019ರವರೆಗಿನ ಅಂದರೆ ಬಿಜೆಪಿ, ಕಾಂಗ್ರೆಸ್ ಮತ್ತು ಎಚ್.ಡಿ.ಕುಮಾರ ಸ್ವಾಮಿ ಅಧಿಕಾರವಧಿಯ ವರೆಗೂ ಟೆಲಿಪೋನ್ ಕದ್ದಾಲಿಕೆಯ ಬಗ್ಗೆ ಸಿಬಿಐ ತನಿಖೆ ನಡೆಸಲಿ ನೋಡೋಣ’ ಎಂದು ಸವಾಲು ಹಾಕಿದರು.
ಋಣ ಸಂದಾಯ: ಎಚ್.ವಿಶ್ವನಾಥ್ಗೆ ನೈತಿಕತೆ ಇಲ್ಲ. ಜೆಡಿಎಸ್ನಲ್ಲಿ ರಾಜಕೀಯ ಪುನರ್ಜನ್ಮ ಪಡೆದು ಎಚ್.ಡಿ..ಕುಮಾರಸ್ವಾಮಿಗೆ ದೊಡ್ಡ ಕಾಣಿಕೆ ನೀಡಿ, ಈಗ ತನ್ನ ಅಳಿಯನಿಗೆ ಮುಖ್ಯ ಇಂಜಿನಿಯರ್ ಹುದ್ದೆ ಕೊಟ್ಟಿರುವ ಯಡಿಯೂರಪ್ಪನವರ ಋಣ ತೀರಿಸುತ್ತಿದ್ದಾ ರೆಂದು ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದರು.
ಇದುವರೆಗೂ ನಾನು ಹಾಸನ ಜಿಲ್ಲೆಯ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿ ಹೋರಾಟ ಮಾಡಿಕೊಂಡು ಬಂದಿದ್ದೆ. ಆದರೆ ಇನ್ನು ಮುಂದೆ ಎಚ್.ಡಿ.ಕುಮಾರಸ್ವಾಮಿ ಭುಜಕ್ಕೆ ನನ್ನ ಭುಜಕೊಟ್ಟು ರಾಜಕೀಯ ವಿರೋಧಿಗಳ ಕುತಂತ್ರವನ್ನು ಮೆಟ್ಟಿ ನಿಲ್ಲುವ ಹೋರಾಟ ನಡೆಸುವೆ.
-ಎಚ್.ಡಿ.ರೇವಣ್ಣ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ