ಪರಮ ಭ್ರಷ್ಟಾಚಾರಿ ಡಿಕೆಶಿಯ ವ್ಯವಸ್ಥಿತ ಷಡ್ಯಂತ್ರ : ಅಶ್ವತ್ಥ್ ನಾರಾಯಣ್ ಸಮರ್ಥಿಸಿ ಬಿಜೆಪಿ
ಹರಕು ಬಾಯಿ ದಾಸನ ಮಾತುಗಳನ್ನೇ ಗಂಭೀರವಾಗಿ ತೆಗೆದುಕೊಂಡಿದ್ದು ವಿಪರ್ಯಾಸ
Team Udayavani, May 2, 2022, 6:26 PM IST
ಬೆಂಗಳೂರು: ‘ಮಾಧ್ಯಮಗಳು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಪಾತ್ರ ಇದೆ ಎಂದು ಆರೋಪಿಸಿರುವುದು ಹೊಸ ಸಮರಕ್ಕೆ ಕಾರಣವಾಗಿದ್ದು, ಬಿಜೆಪಿ ಟ್ವೀಟ್ ಗಳ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದೆ.
‘ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಧ್ಯಕ್ಷ ಡಿಕೆಶಿ ಅವರು ವ್ಯವಸ್ಥಿತ ಷಡ್ಯಂತ್ರ ಪ್ರಾರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಇದೇ ಪಿತೂರಿಯಲ್ಲಿ ಡಿ.ಕೆ.ಶಿವಕುಮಾರ್ ನಿರತರಾಗಿದ್ದರು.ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿರುವುದು ಇದರ ಮುಂದುವರಿದ ಭಾಗವಷ್ಟೇ’ ಎಂದು ಟ್ವೀಟ್ ಮಾಡಿದೆ.
‘ಡಿಕೆಶಿ ಪರಮ ಭ್ರಷ್ಟಾಚಾರಿ, ನಾವೆಲ್ಲ ಸೇರಿ ಅಧ್ಯಕ್ಷ ಸ್ಥಾನ ಕೊಡಿಸಿದೆವು. ಆದರೆ ತಕ್ಕಡಿ ಏರುತ್ತಿಲ್ಲ ಎಂದು ಉಗ್ರಪ್ಪ ಪಿಸುಗುಟ್ಟಿದ್ದರು. ಅಂದು ಉಗ್ರಪ್ಪರನ್ನು ಪ್ರಶ್ನಿಸುವ ಧೈರ್ಯವನ್ನೂ ಮಾಡದ ಡಿಕೆಶಿ, ಇಂದು ಅದೇ ಹರಕು ಬಾಯಿ ದಾಸನ ಮಾತುಗಳನ್ನೇ ಗಂಭೀರವಾಗಿ ತೆಗೆದುಕೊಂಡಿದ್ದು ವಿಪರ್ಯಾಸವಲ್ಲದೆ ಮತ್ತೇನು? ಎಂದು ಇನ್ನೊಂದು ಟ್ವೀಟ್ ನಲ್ಲಿ ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ : ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವತ್ಥ್ ನಾರಾಯಣ್ ಹೆಗಲು ಮುಟ್ಟಿಕೊಂಡಿದ್ದೇಕೆ? : ಡಿಕೆಶಿ
ರಾಮನಗರ ಜಿಲ್ಲೆಯಲ್ಲಿ ಡಿಕೆ ಸಹೋದರರ ಗೂಂಡಾಗಿರಿಯನ್ನು ಡಾ. ಅಶ್ವತ್ಥ್ ನಾರಾಯಣ್ ವ್ಯವಸ್ಥಿತವಾಗಿ ಮಟ್ಟಹಾಕಿದ್ದರು. ಭೂ ಕಬಳಿಕೆ ವ್ಯವಹಾರಗಳಿಗೆ ತಡೆಯೊಡ್ಡಿ, ಅಕ್ರಮಗಳನ್ನು ಬುಡಮೇಲು ಮಾಡಿದ್ದರು.ಇದರಿಂದ ರೋಸಿ ಹೋದ ಡಿ.ಕೆ.ಶಿವಕುಮಾರ್ ಈಗ ಆಧಾರ ರಹಿತ ಆರೋಪದ ಮೊರೆ ಹೋಗಿದ್ದಾರೆ. ಪರಮ ಭ್ರಷ್ಟನಿಗೆ ಭ್ರಷ್ಟಾಚಾರದ್ದೇ ಕನಸು!!! ಎಂದು ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದೆ.
ಕೆಪಿಸಿಸಿಯ ಭ್ರಷ್ಟಾಧ್ಯಕ್ಷ ಡಿಕೆಶಿ ಅವರ ಕಮಿಷನ್ ವ್ಯವಹಾರವನ್ನು ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಉಗ್ರಪ್ಪ ಅವರು ನಾಡಿಗೆಲ್ಲ ಹಂಚಿದ್ದರು.ಭ್ರಷ್ಟಾಚಾರದಲ್ಲಿ ದಿನನಿತ್ಯ ಮುಳುಗೇಳುತ್ತಿರುವ ಡಿ.ಕೆ.ಶಿವಕುಮಾರ್ ಅವರು ಈಗ ಆಧಾರ ರಹಿತ ಆರೋಪ ಮಾಡಿದರೆ ನಂಬಲು ಸಾಧ್ಯವೇ? ಎಂದು ಸಚಿವರ ಪರ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ