ಮುಖ್ಯಮಂತ್ರಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ


Team Udayavani, Jun 27, 2019, 3:05 AM IST

bjp-logo

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ವೈಟಿಪಿಎಸ್‌ ಸಿಬ್ಬಂದಿಯ ಸಮಸ್ಯೆಗಳಿಗೆ ಸ್ಪಂದಿಸದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ದರ್ಪ, ಉದ್ಧಟತನ ತೋರಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಇದಕ್ಕಾಗಿ ಸಿಎಂ ಅವರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

ಮುಖ್ಯಮಂತ್ರಿಗಳು ಇದೇ ಧೋರಣೆ ಮುಂದುವರಿಸಿದರೆ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ತಮ್ಮ ಅಹವಾಲು ಹೇಳಿಕೊಳ್ಳಲು ಬಂದ ವೈಟಿಪಿಎಸ್‌ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರು ಉದ್ಧಟತನದಿಂದ ವರ್ತಿಸಿದ್ದಾರೆ.

ಸಿಬ್ಬಂದಿಯನ್ನು ಜನತಾ ದರ್ಶನ ಸ್ಥಳಕ್ಕೆ ಕರೆಸಿಕೊಂಡು ಚರ್ಚಿಸಬಹುದಿತ್ತು. ಅದನ್ನು ಬಿಟ್ಟು “ಲಾಠಿ ಚಾರ್ಜ್‌ ಮಾಡಿಸಬೇಕಾ. ಮೋದಿಗೆ ಮತ ಹಾಕುತ್ತೀರಿ, ಸಮಸ್ಯೆ ಪರಿಹಾರಕ್ಕೆ ನಾನು ಬೇಕಾ’ ಎಂದು ಪ್ರಶ್ನಿಸುವ ಮೂಲಕ ಗಾಂಭೀರ್ಯತೆ, ಸ್ಥಿಮಿತ, ಮಾನಸಿಕ ಸಮತೋಲನ ಕಳೆದುಕೊಂಡ ಹತಾಶ ಮನೋಭಾವ ಪ್ರದರ್ಶಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ರಾಜ್ಯದಲ್ಲಿ ರಾಯಚೂರು ಜಿಲ್ಲೆಯೂ ಹಿಂದುಳಿದಿದೆ. ಅಲ್ಲಿನ ಜನರ ಸಮಸ್ಯೆ ಆಲಿಸಲು ಗ್ರಾಮ ವಾಸ್ತವ್ಯ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಅಹವಾಲು ಹೇಳಿಕೊಳ್ಳಲು ಬಂದವರ ಮೇಲೆ ದರ್ಪ ತೋರಿದ್ದು ಖಂಡನೀಯ.

ಪ್ರಧಾನಿ ಮೋದಿಯವರು ಜಗತ್ತಿನಲ್ಲೇ ಪ್ರಖ್ಯಾತರು. ಕುಮಾರಸ್ವಾಮಿಯವರು ರಾಜ್ಯದಲ್ಲಿ ಎಲ್ಲಿಗೆ ಹೋದರೂ ಜನ ಛೀಮಾರಿ ಹಾಕುತ್ತಿದ್ದಾರೆ. ಹಾಗಿದ್ದರೂ ಮೋದಿಯವರನ್ನು ಟೀಕಿಸಿದ್ದಾರೆ. ಕುಮಾರಸ್ವಾಮಿಯವರು ಆಕಾಶಕ್ಕೆ ಉಗುಳಿದರೆ ಆ ಉಗುಳು ಅವರ ಮೇಲೆಯೇ ಬೀಳುತ್ತಿದೆ. ಮೋದಿಯವರೆಲ್ಲಿ, ಕುಮಾರಸ್ವಾಮಿಯವರೆಲ್ಲಿ ಎಂದು ಕಿಡಿ ಕಾರಿದರು.

ಇದು ಎರಡನೇ ನಾಟಕ: ಮುಖ್ಯಮಂತ್ರಿಗಳದ್ದು ಗ್ರಾಮ ವಾಸ್ತವ್ಯವಲ್ಲ, ಬದಲಿಗೆ ನಾಟಕ. 13 ವರ್ಷಗಳ ಹಿಂದೆ 42 ಹಳ್ಳಿಗಳಲ್ಲಿ ವಾಸ್ತವ್ಯ ನಡೆಸಿದರೂ ಏನೂ ಸಾಧನೆಯಾಗಿಲ್ಲ. ಇದೀಗ ಎರಡನೇ ನಾಟಕ ಶುರು ಮಾಡಿದ್ದಾರೆ.

ಮುಖ್ಯಮಂತ್ರಿಗಳು ಕೂಡಲೇ ರಾಜ್ಯದ ಜನ ಅದರಲ್ಲೂ ಉತ್ತರ ಕರ್ನಾಟಕದವರ ಕ್ಷಮೆ ಯಾಚಿಸಬೇಕು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. “ಉತ್ತರ ಕರ್ನಾಟಕದವರು ತಮಗೆ ಮತ ಹಾಕಿದ್ದಾರಾ’ ಎಂದು ಪದೇ ಪದೇ ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿಗಳು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಪ್ರವಾಸದಲ್ಲಿ ಕಾಂಗ್ರೆಸ್‌ನ ಪಾಲು ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ವೈಟಿಪಿಎಸ್‌ ಸಿಬ್ಬಂದಿ ಮೇಲೆ ಮುಖ್ಯಮಂತ್ರಿಗಳು ದರ್ಪ ತೋರಿರುವುದರಲ್ಲೂ ಕಾಂಗ್ರೆಸ್‌ನ ಸಮಪಾಲು ಇದೆ.

ಮುಖ್ಯಮಂತ್ರಿಗಳ ದುರಹಂಕಾರದ ವರ್ತನೆ ಬಗ್ಗೆ ಪರಮೇಶ್ವರ್‌, ಸಿದ್ದರಾಮಯ್ಯ, ಈಶ್ವರ್‌ ಖಂಡ್ರೆ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಸ್ವಾಮಿ ಕಾರ್ಯ, ಸ್ವಕಾರ್ಯ: ಮುಖ್ಯಮಂತ್ರಿಗಳ ಪ್ರವಾಸದ ಉದ್ದೇಶ ಜನರ ಸಮಸ್ಯೆ ಆಲಿಸುವುದಲ್ಲ, ಬದಲಿಗೆ ಪಕ್ಷ ಸಂಘಟನೆ.

ಹಾಗಾಗಿ, ಜೆಡಿಎಸ್‌ ಶಾಸಕರಿರುವ ಗುರುಮಿಠ್ಕಲ್‌, ಮಾನ್ವಿಯಲ್ಲಿ ವಾಸ್ತವ್ಯ ಹೂಡಿದ್ದು, ಗುರುವಾರ ಸಹ ಬೀದರ್‌ನಲ್ಲಿ ಜೆಡಿಎಸ್‌ ಶಾಸಕರ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಅಫ‌ಲ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿರುವ ಕಾರಣ ಅಲ್ಲಿ ವಾಸ್ತವ್ಯ ಹೂಡಿಲ್ಲ.

ಅವರ ಪ್ರವಾಸಕ್ಕೆ ಕಾಂಗ್ರೆಸ್‌ನ ಬೆಂಬಲವಿಲ್ಲ ಎಂಬುದು ಸ್ಪಷ್ಟ. ಮುಖ್ಯಮಂತ್ರಿಗಳ ಪ್ರವಾಸದಿಂದ ಒಂದಷ್ಟು ಕೆಲಸ ಕಾರ್ಯದ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಅವರಿಗೆ ಒಂದಿಷ್ಟು ಹಣ ಸಿಗಬಹುದು. ಹಾಗಾಗಿ, ಇದು ಸ್ವಾಮಿ ಕಾರ್ಯ, ಸ್ವಕಾರ್ಯದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರು ಹೇಳಿದ್ದು 100ರಷ್ಟು ಸತ್ಯ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಳೆಯ ರಾಜಕಾರಣಿ. ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯಕ್ಕೆ ಕೆಲ ಶಕ್ತಿಗಳು ಅಡ್ಡಿಪಡಿಸುತ್ತಿವೆ ಎಂದು ಹೇಳಿರುವುದು 100ಕ್ಕೆ 100ರಷ್ಟು ಸತ್ಯ. ಮುಖ್ಯಮಂತ್ರಿಗಳ ವಾಸ್ತವ್ಯದ ವಿರುದ್ಧ ಬಿಜೆಪಿ ಶಾಸಕರು ಹೋರಾಟ ನಡೆಸಿದ್ದಾರೆ.

ನಾಟಕ ಮಾಡಲು ಬಿಡುವುದಿಲ್ಲ. ಹಗಲು ನಾಟಕ ಕೈಬಿಡಿ ಎಂದು ಒತ್ತಾಯಿಸಿದ್ದೇವೆ. ಈ ಹಿಂದೆ ಕುಮಾರಸ್ವಾಮಿಯವರು ವಾಸ್ತವ್ಯ ಹೂಡಿದ್ದ 42 ಗ್ರಾಮಗಳ ಪೈಕಿ ತಮ್ಮದೇ ಕ್ಷೇತ್ರದ ಜಟ್ಟಿದೊಡ್ಡಿಯಲ್ಲಿ ಇಡಲಾಗಿದ್ದ ಕುರ್ಚಿ, ಮೇಜು, ಯಾವ ವಸ್ತುವನ್ನೂ ನೆನಪಿಗೂ ಉಳಿಸದೆ ತೆಗೆದುಕೊಂಡು ಹೋಗಿದ್ದಾರೆ.

ಒಂದು ಬೇಡಿಕೆಯನ್ನೂ ಈಡೇರಿಸಿಲ್ಲ. ಕೇವಲ ಪ್ರಚಾರಕ್ಕಾಗಿ ವಾಸ್ತವ್ಯ ಮಾಡುತ್ತಿದ್ದಾರೆ. ಅವರ ಪ್ರವಾಸದಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಪ್ರಯೋಜನವಿಲ್ಲ. ಹಾಗಾಗಿ, ಬಿಜೆಪಿ ಯಾವುದೇ ಕೈವಾಡ ನಡೆಸಿಲ್ಲ. ನೇರವಾಗಿಯೇ ವಿರೋಧಿಸಿದ್ದೇವೆ ಎಂದು ತಿರುಗೇಟು ನೀಡಿದರು. ಮುಖಂಡರಾದ ಚಲವಾದಿ ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರಜಾಸತ್ತಾತ್ಮಕವಾಗಿ, ನ್ಯಾಯಯುತವಾಗಿ ಹೇಳಿಕೆ ನೀಡುವುದನ್ನು ಮರೆತು ಬಿಟ್ಟಿದ್ದಾರೆ. ಅವರಿಗೆ ಪುತ್ರ ವ್ಯಾಮೋಹದ ಅಮಲು ಜಾಸ್ತಿಯಾಗಿದೆ. ಅವರು ರಾಜ್ಯದ ಅಭಿವೃದ್ಧಿ ಬಯಸಿದ್ದರೆ ಪುತ್ರನಿಗೆ ಬುದ್ದಿ ಹೇಳಬೇಕಿತ್ತು. ಇನ್ನಾದರೂ ಪುತ್ರ ವ್ಯಾಮೋಹ ಬಿಡಲಿ.
-ಎನ್‌.ರವಿಕುಮಾರ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.