ಬಿಜೆಪಿಯವರಿಗೆ ಸದನ ನಡೆಸಲು ಇಷ್ಟವಿಲ್ಲ: ಸಿದ್ದು
Team Udayavani, Mar 12, 2020, 3:03 AM IST
ಬೆಂಗಳೂರು: ಬಿಜೆಪಿಯವರಿಗೆ ಸದನ ನಡೆಸಲು ಇಷ್ಟವಿಲ್ಲ, ಬಜೆಟ್ ಮೇಲಿನ ಚರ್ಚೆ ನಡೆಯು ವುದೂ ಬೇಕಿಲ್ಲ. ವಿನಾಕಾರಣ ತಂಟೆ ತೆಗೆದು ಗದ್ದಲ ಎಬ್ಬಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸದನ ಮುಂದೂಡಿಕೆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಹಕ್ಕುಚ್ಯುತಿ ಪ್ರಸ್ತಾಪದ ಮೇಲೆ ಸ್ಪೀಕರ್ ನನಗೆ ಮಾತನಾಡಲು ಅವಕಾಶ ಕೊಟ್ಟರೂ ಇವರು ಬಿಡುವುದಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಸಚಿವ ಡಾ.ಕೆ.ಸುಧಾಕರ್ ಮಾತನಾಡಿದ್ದು ರೆಕಾರ್ಡ್ ಇದೆ. ನಾವು ಹಕ್ಕಚ್ಯುತಿ ಪ್ರಸ್ತಾಪ ನೀಡಿದ್ದೇವೆ. ಅದರ ಬಗ್ಗೆ ಚರ್ಚೆಗೆ ಅವಕಾಶ ಕೊಡಲೇಬೇಕು ಎಂದರು. ಬಜೆಟ್ನಲ್ಲಿ ಯಾವುದೇ ಇಲಾಖೆಗೆ ದುಡ್ಡು ಇಟ್ಟಿಲ್ಲ,
ಚರ್ಚೆ ಸಂದರ್ಭದಲ್ಲಿ ಆಕ್ರೋಶ ಎದುರಿಸಬೇಕು ಎಂಬ ಕಾರಣಕ್ಕೆ ಹೀಗೆ ಗಲಾಟೆ ಎಬ್ಬಿಸಲಾಗುತ್ತಿದೆ ಎಂದು ದೂರಿದರು. ಕೊರೊನಾ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಸ್ಥಿತಿ ಇದೆ. ಕಲಬುರಗಿಯಲ್ಲಿ ಒಬ್ಬರು ಶಂಕಿತ ರೋಗಿ ಮೃತಪಟ್ಟ ಬಗ್ಗೆ ವರದಿಯಿದೆ. ಅಧಿವೇಶನ ನಡೆಯುವಾಗ ಸರ್ಕಾರ ಈ ಬಗ್ಗೆ ಸದನದಲ್ಲಿ ಮಾಹಿತಿ ನೀಡಬೇಕಿತ್ತು. ಅದ್ಯಾವುದೂ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ