ಬಿಜೆಪಿಗೆ ಡಿಕೆಶಿ ಅವರಂಥ ಕಳ್ಳರ ಅವಶ್ಯಕತೆ ಇಲ್ಲ: ಯತ್ನಾಳ್

ವಿಜಯಪುರ ಜಿಲ್ಲೆಯಲ್ಲೂ ಇಂಥ ಇಬ್ಬರು ಬಿಜೆಪಿ ಸೇರಲು ನಾಟಕ ಮಾಡುತ್ತಿದ್ದಾರೆ

Team Udayavani, May 26, 2022, 7:34 PM IST

yatnal

ವಿಜಯಪುರ : ಬಿಜೆಪಿ ಪಕ್ಷಕ್ಕೆ ಡಿ.ಕೆ.ಶಿವಕುಮಾರ್ ಅವರಂಥ ಕಳ್ಳರ ಅಗತ್ಯವಿಲ್ಲ, ವಿಜಯಪುರ ಜಿಲ್ಲೆಯಲ್ಲೂ ಅಂಥ ಇಬ್ಬರು ಕಳ್ಳರು ಬಿಜೆಪಿ ಸೇರಲು ಹುನ್ನಾರ ನಡೆಸಿದ್ದಾರೆ ಎಂದು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಾಸ್ತ್ರ ಪ್ರಯೋಗಿಸಿದರು.

ಗುರುವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಶರಣಾಗಲು ಯಾರು ಹೇಳಿದರು. ಬಿಜೆಪಿ ಪಕ್ಷಕ್ಕೆ ಇಂಥ ಕಳ್ಳರ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಲೂಟಿ ಮಾಡಿರುವ ವಿಜಯಪುರ ಜಿಲ್ಲೆಯಲ್ಲೂ ಇಂಥ ಇಬ್ಬರು ಬಿಜೆಪಿ ಸೇರಲು ನಾಟಕ ನಡೆಸಿದ್ದಾರೆ ಎಂದರು.
ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಇಡಿ, ಸಿಬಿಐ ಸೇರಿದಂತೆ ಸ್ವತಂತ್ರ ಅಧಿಕಾರ ಇರುವ ಸ್ವಾಯತ್ತ ಸಂಸ್ಥೆಗಳು ಕೇಂದ್ರ ಸರ್ಕಾರದ ಅಧಿನದಲ್ಲಿ ಇರುವುದಿಲ್ಲ. ಹೀಗಾಗಿ ಇಡಿ ದೋಷಾರೋಪ ಸಲ್ಲಿಸಿರುವ ಇಡಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಇಲ್ಲ, ಸ್ವತಂತ್ರ ನಿರ್ವಹಣೆ ಮಾಡುತ್ತವೆ ಎಂದರು.

ಈ ಹಿಂದೆ ಇದೇ ಇಡಿ ವಿಜಯೇಂದ್ರ ಅವರ ಬೆಂಬಲಿಗ ಉಮೇಶ ಕಂಡಕ್ಟರ್ ಎಂಬವರ ವಿರುದ್ಧ ದಾಳಿ ಆಗಿತ್ತು. ಇದು ದುರುದ್ದೇಶದಿಂದ ಕೇಂದ್ರ ಸರ್ಕಾರ ಯಡಿಯೂರಪ್ಪ ವಿರುದ್ಧ ಸೇಡು ತೀರಿಸಿಕೊಳ್ಳಲು ನಡೆಸಿದ ದಾಳಿ ಎಂದೆಲ್ಲ ಮಾಧ್ಯಮಗಳು ಬಿಂಬಿಸಿದವು ಎಂದರು.

ಕೇಂದ್ರದಲ್ಲಿ ಸಚಿವರಾಗಿದ್ದ ಸಂಸದ ಜಿ.ಎಂ.ಸಿದ್ಧೇಶ್ವರ, ಪ್ರಭಾಕರ ಕೋರೆ ಸೇರಿದಂತೆ ಹಲವರ ವಿರುದ್ಧ ದಾಳಿ ಮಾಡಿದ್ದಾರೆ. ನನ್ನ ವಿರುದ್ಧವೂ ಲೋಪ ಕಂಡು ಬಂದಲ್ಲಿ ದಾಳಿ ಮಾಡಬಹುದು ಎಂದು ಇಡಿ ಕಾರ್ಯವನ್ನು ಶ್ಲಾಘಿಸಿದರು.

ಇಂಥ ಕಳ್ಳರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಲ್ಲಿ ಪಕ್ಷದ ಸಿದ್ಧಾಂತ ಎಲ್ಲಿ ಉಳಿಯುತ್ತದೆ. ಮೊನ್ನೆ ಸಚಿವ ಗೋವಿಂದ ಕಾರಜೋಳ ಅವರು ಒಂದಿಬ್ಬರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ. ಹೀಗಾದರೆ ಪಕ್ಷಕ್ಕೆ ದುಡಿದವರು ಎಲ್ಲಿ ಹೋಗಬೇಕು. ಮೇಲಿನವರು ಇಂಥವರನ್ನು ಪಕ್ಷಕ್ಕೆ ಕರೆ ತಂದರೆ ಕಾರ್ಯಕರ್ತರು ಎಲ್ಲಿ ಹೋಗಬೇಕು ಎಂದು ವರಿಷ್ಠರನ್ನು ಪ್ರಶ್ನಿಸುತ್ತೇನೆ ಎಂದರು.

ಬಬಲೇಶ್ವರ ಕ್ಷೇತ್ರದಲ್ಲಿ ಒಂದು ಏಳೆಂಟು ಗಿರಾಕಿ ಕಾಯುತ್ತಿವೆ. ಅಣ್ಣ ಕಾಂಗ್ರೆಸ್‍ನಲ್ಲಿ ಸೋನಿಯಾ ಗಾಂಧೀಗಾಗಿ ಜೀವ ಕೊಡುತ್ತೇನೆ ಎನ್ನುತ್ತಾನೆ. ತಮ್ಮ ನರೇಂದ್ರ ಮೋದಿ ಅವರಿಗೆ ಪ್ರಾಣ ಕೊಡುತ್ತೇನೆ ಎನ್ನುತ್ತಾನೆ. ಇಂಥವರನ್ನು ಪಕ್ಷ ಅವಕಾಶ ನೀಡಬಾರದು. ಪಕ್ಷಕ್ಕೆ ದುಡಿದವರಿಗೆ ಅವಕಾಶ ನೀಡಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹಾಗೂ ಅವರ ಸಹೋದರ ಬಿಜೆಪಿ ನಾಯಕ ವಿಜುಗೌಡ ಪಾಟೀಲ ಅವರನ್ನು ಕುಟುಕಿದರು.

ಎಲ್ಲ ವಿಷಯವನ್ನು ತೆಗೆದು ಹಾಕಬೇಕು

ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಂತ ಕನಕದಾಸರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಅವರು, ನಮಗೆಲ್ಲ ಶಾಲೆಯ ಪಠ್ಯದಲ್ಲಿ ಅಕ್ಬರ್, ಔರಂಗಜೇಬ್, ಟಿಪ್ಪು ಸುಲ್ತಾನ್ ಎಂದಷ್ಟೇ ಕಲಿಸಲಾಯಿತು. ಆದರೆ ನಮಗೆ ನಮ್ಮ ಸತ್ಪುರುಷರ ಹೆಸರುಗಳೇ ಗೊತ್ತಿರಲಿಲ್ಲ. ಪಠ್ಯದಲ್ಲಿ ನಾವು ಕಲಿತವರೆಲ್ಲ ಕಳ್ಳರು, ಲಫಂಗರು, ಲಂಪಟ, ದರೋಡೆಕೋರರು ಎಂದು ಈಗ ನಮಗೆ ಗೊತ್ತಾಗಿದೆ. ಪಠ್ಯದಲ್ಲಿರುವ ಇಂಥವರ ಕುರಿತ ಎಲ್ಲ ವಿಷಯವನ್ನು ತೆಗೆದು ಹಾಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅಗ್ರಹಿಸಿದರು.

ನಾನು ಸಂಸದನಾಗಿದ್ದ ಸಂದರ್ಭದಲ್ಲಿ ದೆಹಲಿಯಲ್ಲಿ ವೆಂಕಯ್ಯ ನಾಯ್ಡು ಅವರ ಮನೆ ಬಳಿ ರಸ್ತೆಯೊಂದಕ್ಕೆ ಔರಂಗಜೇಬ್ ರೋಡ್ ಎಂಬ ಹೆಸರಿತ್ತು. ಲಕ್ಷಾಂತರ ಹಿಂದೂಗಳ ಕಗ್ಗೊಲೆ ಮಾಡಿದ ಇವರ ಹೆಸರು ಯಾಕೆ ರಸ್ತೆಗೆ ಇರಿಸಿದ್ದಾರೆ ಎಂದು ಪ್ರಶ್ನಿಸಿದ್ದೆ ಎಂದರು.

ಸದರಿ ರಸ್ತೆಗೆ ಔರಂಣಗಜೇಬನ ಹೆಸರು ತೆಗೆದು ದೇಶಕಂಡ ಅಪರೂಪರ ರಾಷ್ಟ್ರಪತಿಯಾಗಿದ್ದ ಡಾಎಪಿಜೆ ಅಬ್ದುಲ್ ಕಲಾಂ ಹೆಸರು ನಾಮಕರಣ ಮಾಡಿದ್ದಾರೆ. ನಮ್ಮ ನಗರಕ್ಕೆ ಇದ್ದ ಬಿಜಾಪುರ ಎಂಬ ಹೆಸರನ್ನು ಬದಲಿಸಿ ವಿಜಯಪುರ ಎಂದು ಮರುನಾಮಕರಣ ಮಾಡಲಾಗಿದೆ. ನಾನು ನಗರ ಶಾಸಕನಾದ ಬಳಿಕ ಇಲ್ಲಿನ ಅನೇಕ ರಸ್ತೆಗಳಿಗೆ ದೇಶಭಕ್ತ, ರಾಷ್ಟ್ರ ನಾಯಕರ ಹೆಸರು ನಾಮಕರಣ ಮಾಡಲಾಗಿದೆ ಎಂದರು.

ಇದನ್ನೂ ಓದಿ : ತಗ್ಗಿಗೆ ಉರುಳಿದ ಕಾರು: ಬಿಜೆಪಿ ಶಾಸಕರ ಆಪ್ತ ಸಹಾಯಕ ಪಾರು

ಪಠ್ಯ ಕೇಸರೀಕರಣ ಆಧಾರ ರಹಿತ ಆರೋಪ : ಸಚಿವ ಭೈರತಿ

ಶಿಕ್ಷಣದಲ್ಲಿ ಕೇಸರಿಕರಣ ಮತ್ತೊಂದು ಮಗದೊಂದು ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸಮಾಜಕ್ಕೆ ಕೊಡುಗೆ ನೀಡಿದವರ ಪಠ್ಯ ಅಳವಡಿಸಲಾಗಿದೆ. ಯಾವ ಪಠ್ಯ ಅಳವಡಿಕೆ ಕುರಿತು ತಜ್ಞರ ಅಭಿಪ್ರಾಯ ಅನುಸರಿಸಲಾಗಿದೆ. ಇಂಥದ್ದೆ ಪಠ್ಯ ಕೈಬಿಟ್ಟಿದ್ದಾರೆ ಅನ್ನೋದಕ್ಕೆ ಪುರಾವೆ ಇಲ್ಲದೇ ಕೆಲವರು ಆರೋಪಿಸುತ್ತಿದ್ದು, ಇಂಥ ಬೆಳವಣಿಗೆ ಸರಿಯಲ್ಲ ಎಂದು ಸಚಿವ ಬೈರತಿ ಬಸವರಾಜ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ಪ್ರತಿಪಕ್ಷಗಳ ನಾಯಕರ ಆರೋಪ ನಿರಾಧಾರ ಎಂದರು.

ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿಲ್ಲ, ನಿರಾಸೆಯಾಗುವ ಅಗತ್ಯವೂ ಇಲ್ಲ. ಯುವ ನಾಯಕರಾಗಿರುವ ವಿಜಯೇಂದ್ರ ಅವರು ರಾಜ್ಯ ಸುತ್ತಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರ ಪಕ್ಷ ಸಂಘಟನೆಯನ್ನು ಪರಿಗಣಿಸಿ ಪಕ್ಷದ ವರಿಷ್ಠರು ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.