ಬಿಜೆಪಿ 30 ಸೀಟು ಮೇಲೆ ಗೆಲ್ಲುವುದಿಲ್ಲ: ರಾಮಲಿಂಗಾರೆಡ್ಡಿ
ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ನಿಂದ ಪಾಲಿಕೆಗೆ ಮುತ್ತಿಗೆ
Team Udayavani, Aug 26, 2021, 8:28 PM IST
ಬೆಂಗಳೂರು: ಆಸ್ತಿ ತೆರಿಗೆ ಹೆಚ್ಚಳ, ತೈಲ ಮತ್ತು ಅಡುಗೆ ಅನಿಲ ದರ ಏರಿಕೆ ಹಾಗೂ ಬಿಜೆಪಿ ಸರಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಗುರುವಾರ ಬಿಬಿಎಂಪಿಗೆ ಮುತ್ತಿಗೆ ಹಾಕಲಾಯಿತು.
ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಮತ್ತಿತರ ಮುಖಂಡರ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಸಮಾವೇಶಗೊಂಡ ಕಾರ್ಯಕರ್ತರು ಪಾಲಿಕೆಗೆ ಮುತ್ತಿಗೆ ಹಾಕಿದರು.
ಇದನ್ನೂ ಓದಿ:ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು, ನಿಮಗೆ ಗೌರವವಿದ್ದರೆ ಜನರಿಗೆ ಹಾಕುತ್ತಿರುವ ಹೆಚ್ಚುವರಿ ತೆರಿಗೆ ಹಾಗೂ ದುಪ್ಪಟ್ಟು ದಂಡವನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣ. ಆಗ ಬಿಜೆಪಿಗೆ 30ಕ್ಕಿಂತ ಹೆಚ್ಚು ಸ್ಥಾನವನ್ನು ಗೆಲ್ಲದು ಎಂದು ಹೇಳಿದರು.