ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ, ಭ್ರಷ್ಟಾಚಾರ ವಿಪರೀತವಾಗಿದೆ: ರಾಮಲಿಂಗ ರೆಡ್ಡಿ
Team Udayavani, Jan 3, 2021, 3:31 PM IST
ಬೆಂಗಳೂರು: ಇವತ್ತು ಬಿಜೆಪಿಗೆ ಹೇಳುವವರು ಕೇಳುವವರು ಯಾರು ಇಲ್ಲ. ಅವರು ನಡೆದಿದ್ದೆ ದಾರಿ ಅಂದುಕೊಂಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕಲು ಹೊರಟಿದ್ದಾರೆ. ಎಲ್ಲರನ್ನೂ ಆಮಿಷ ಒಡ್ಡಿ ಬಿಜೆಪಿಗೆ ಸೆಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಕಾಂಗ್ರೆಸ್ ಬೆಂಗಳೂರು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಆಡಳಿತ ವಿರೋಧ ಪಕ್ಷ ಎರಡು ಇರಬೇಕು. ಆದರೆ ಬಿಜೆಪಿಯವರು ತಮ್ಮ ಲೋಪ ಮುಚ್ಚಿಕೊಳ್ಳಲು ಆಮಿಷ ಒಡ್ಡುತ್ತಿದ್ದಾರೆ. ಭ್ರಷ್ಟಾಚಾರ ಇವತ್ತು ವಿಪರೀತವಾಗಿದೆ. ಎಲ್ಲಿ ನೋಡಿದರೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಆದರೆ ಒಬ್ಬರಿಗೂ ಮೋದಿ ಎದುರು ಮಾತನಾಡುವ ತಾಕತ್ತಿಲ್ಲ. ನಮ್ಮ ಜಿಎಸ್ ಟಿ ಹಣ ಕೊಟ್ಟಿಲ್ಲ, ನೆರೆ,ಬರದ ಹಣ ಕೊಡಲು ಕೇಂದ್ರಕ್ಕೆ ಸಾಧ್ಯವಾಗಿಲ್ಲ. ನಮ್ಮ ಹಣ ಕೇಳಿದರೆ ಆರ್ ಬಿ ಐ ಹತ್ರ ಸಾಲ ಮಾಡಿ ಎನ್ನುತ್ತಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
ರೈತರ ಹೋರಾಟಕ್ಕೆ ಬಿಜೆಪಿಯವರ ಖಲಿಸ್ತಾನದ ಬಣ್ಣ ಕಟ್ಟಿದ್ದಾರೆ. ಹೀಗಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಿದೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೊಗುವ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ಮಿಷನ್ 2022 ಮಾಡುತ್ತಿದಾರೆ, ಆದರೆ ಅದಕ್ಕೆ ಹಣವನ್ನೇ ಮೀಸಲಿಟ್ಟಿಲ್ಲ. ಹಣವನ್ನೇ ಇಡದೇ ಬಿಜೆಪಿ ಸರ್ಕಾರ ಮಿಷನ್ 2022 ಘೋಷಿಸಿದೆ. ನಾವು ಈ ಬಗ್ಗೆ ಹೋರಾಟ ಮಾಡಿದರೆ ಪತ್ರಿಕೆಗಳಲ್ಲಿ ಬರೆಯಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ, ಬಿಜೆಪಿ ನಾಯಕರಿಗೆ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ನಮ್ಮಲ್ಲೂ ಗುಂಪುಗಳಿವೆ, ಆದರೆ ಬಿಜೆಪಿಯಷ್ಟಿಲ್ಲ, ಅಲ್ಲಿ ಗುಂಪುಗಾರಿಕೆ ಹೆಚ್ಚಿದೆ. ಹಾಗಾಗಿ ಸಂಪುಟ ವಿಸ್ತರಣೆಯನ್ನೇ ಮಾಡಲಾಗಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ: ಜೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಬೆಂಗಳೂರಿಗೆ ಶಿಫ್ಟ್
ಬಿಜೆಪಿ ಈ ಹಿಂದೆ ಮನುವಾದ ಅನುಸರಣೆ ಮಾಡುತ್ತಿತ್ತು. ಈಗ ಬಿಜೆಪಿ ‘ಮನೀ’ ವಾದ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ಯಡಿಯೂರಪ್ಪ ಡಾಕ್ಟರ್ ಯಡಿಯೂರಪ್ಪ ಅಂತ ಹಾಕಿಕೊಳ್ಳುವುದನ್ನೇ ಬಿಟ್ಟರ ಅಂತಹ ಕಂಪನಿ ಅವರಿಗೆ ಡಾಕ್ಟರೇಟ್ ಕೊಟ್ಟಿತ್ತು. ಈಗ ಮೋದಿಗೂ ಅಮೆರಿಕಾದ ಅವಾರ್ಡ್ ಕೊಟ್ಟಿದ್ದಾರೆ, ಟ್ರಂಪ್ ಸೋಲೋದಕ್ಕೆ ಓಟ್ ಕೊಡಿಸಿದರಲ್ಲ, ಅದಕ್ಕೇ ಅವಾರ್ಡ್ ಕೊಟ್ಟಿದ್ದಾರೆ. ಬಿಜೆಪಿಯವರು ಎಂದರೆ ಡೋಂಗಿಗಳು ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ