Drought Study ನ.3ರಿಂದ ಬಿಜೆಪಿಯಿಂದ ಬರ ಅಧ್ಯಯನ

33 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಬರ ಅಧ್ಯಯನಕ್ಕೆ 17 ತಂಡ ರಚಿಸಿದ ಬಿಜೆಪಿ

Team Udayavani, Oct 30, 2023, 9:50 PM IST

Drought Study ನ.3ರಿಂದ ಬಿಜೆಪಿಯಿಂದ ಬರ ಅಧ್ಯಯನ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ನಡೆಸಲು 17 ತಂಡಗಳನ್ನು ರಚಿಸಿರುವ ಬಿಜೆಪಿ, ನ.3ರಿಂದ 10ರ ವರೆಗೆ 33 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.

ಪ್ರತಿ ತಂಡವೂ 2 ಜಿಲ್ಲೆಗಳಂತೆ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ನಡೆಸಲಿದ್ದು, ರೈತರೊಂದಿಗೆ ಬೆಳೆ ನಷ್ಟ, ವಿದ್ಯುತ್‌ ಸಮಸ್ಯೆ, ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದೆಯಲ್ಲದೆ, ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರು, ಬೆಳೆ ನಷ್ಟದಿಂದ ಆಹಾರೋತ್ಪಾದನೆ ಮೇಲೆ ಆಗಬಹುದಾದ ಪರಿಣಾಮ, ಜನರಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್‌ ಪೂರೈಕೆ ಇತ್ಯಾದಿಗಳ ಬಗ್ಗೆ ಮಾಹಿತಿ ಕಲೆ ಹಾಕಲಿದೆ.

ರಾಜ್ಯದ ಅಣೆಕಟ್ಟುಗಳಲ್ಲಿ ನೀರಿಲ್ಲ. ಜಮೀನುಗಳು ಒಡೆದು ಹೋಗಿವೆ. ಕುಡಿಯುವ ನೀರು ಲಭಿಸುತ್ತಿಲ್ಲ. ಟ್ಯಾಂಕರ್‌ಗಳಲ್ಲಿ ನೀರು ಪೂರೈಸುವ ಪರಿಸ್ಥಿತಿ ಇದೆ. ಕರೆಂಟ್‌ ದುಬಾರಿಯಾಗಿದೆ. ಸಣ್ಣ ಕೈಗಾರಿಕೆಗಳು ಬಂದ್‌ ಆಗಿವೆ. ಕೊಳವೆಬಾವಿಗಳು ಬತ್ತಿ ಹೋಗಿವೆ. ನೀರಿದ್ದರೂ ಅದನ್ನು ಸರಬರಾಜು ಮಾಡಲು ವಿದ್ಯುತ್‌ ಇಲ್ಲ. ಎಪಿಎಂಎಸಿ ಗಳಿಗೆ ಸಂಪೂರ್ಣ ವ್ಯಾಪಾರ ಇಲ್ಲವಾಗಿದೆ. ಇದು ಸೇರಿ ಗೋಶಾಲೆಗಳಿಗೂ ಭೇಟಿ ಮಾಡಲು ತಂಡವನ್ನು ಪಕ್ಷ ನಿಯೋಜಿಸಿದೆ. ಬರದ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ವಿಶೇಷ ಸಮಯ ನಿಗದಿಗೆ ಆಗ್ರಹಿಸಲಾಗುತ್ತದೆ.

ಎಲ್ಲಿ, ಯಾರ ಪ್ರವಾಸ?
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನೇತೃತ್ವದ ತಂಡವು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿದರೆ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ತಂಡವು ತುಮಕೂರು ಮತ್ತು ಬೆಂಗಳೂರು ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದೆ. ಮಾಜಿ ಸಚಿವ ಸಿ.ಟಿ. ರವಿ ನೇತೃತ್ವದ ತಂಡವು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡರೆ, ಶಾಸಕ ಅರವಿಂದ ಬೆಲ್ಲದ್‌ ನೇತೃತ್ವದ ತಂಡವು ರಾಯಚೂರು ಮತ್ತು ಯಾದಗಿರಿ ಭಾಗಕ್ಕೆ ಭೇಟಿ ನೀಡಲಿದೆ.

ಬಿ.ವೈ. ವಿಜಯೇಂದ್ರ (ಬೀದರ್‌, ಕಲಬುರಗಿ), ಕೆ.ಎಸ್‌. ಈಶ್ವರಪ್ಪ (ಬಳ್ಳಾರಿ, ಕೊಪ್ಪಳ), ಬಿ.ಶ್ರೀರಾಮುಲು (ಹಾವೇರಿ, ಗದಗ), ಅರವಿಂದ ಲಿಂಬಾವಳಿ (ಬೆಳಗಾವಿ, ಚಿಕ್ಕೋಡಿ), ಬಸನಗೌಡ ಪಾಟೀಲ್‌ ಯತ್ನಾಳ್‌ (ಮೈಸೂರು, ಚಾಮರಾಜನಗರ), ವಿ.ಸುನೀಲ್‌ ಕುಮಾರ್‌ (ಶಿವಮೊಗ್ಗ, ಉತ್ತರ ಕನ್ನಡ), ಆರಗ ಜ್ಞಾನೇಂದ್ರ (ಉಡುಪಿ, ಚಿಕ್ಕಮಗಳೂರು), ವಿಶ್ವೇಶ್ವರ ಹೆಗಡೆ ಕಾಗೇರಿ (ದಾವಣಗೆರೆ, ಚಿತ್ರದುರ್ಗ), ಆರ್‌.ಅಶೋಕ (ಮಂಗಳೂರು, ಕೊಡಗು), ಡಿ.ವಿ. ಸದಾನಂದ ಗೌಡ (ಮಂಡ್ಯ, ಹಾಸನ), ಕೋಟ ಶ್ರೀನಿವಾಸ ಪೂಜಾರಿ (ಬೆಂಗಳೂರು ಗ್ರಾಮಾಂತರ, ರಾಮನಗರ), ಗೋವಿಂದ ಕಾರಜೋಳ (ಧಾರವಾಡ, ವಿಜಯನಗರ).

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.