ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು
ಹಲವು ಸಚಿವರಿಂದ ನಿಯಮ ಪಾಲನೆ
Team Udayavani, May 9, 2022, 7:20 AM IST
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ.
ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು ಕ್ರಮೇಣ ನಾಯಕತ್ವ ಪ್ರತಿಷ್ಠೆ ಯಿಂದಾಗಿ ಮೂರು ಹೋಳಾ ಗಿದ್ದು, ಎಲ್ಲರ ನಡೆಯೂ ನಿಗೂಢವಾಗಿದೆ.
ಪಕ್ಷಾಂತರದ ಅನುಮಾನ
ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ವಲಸೆ ಬಂದು ಬಿಜೆಪಿಯಲ್ಲಿಯೇ ಮುಂದುವರಿಯುವುದಾಗಿ ಮೇಲಿಂದ ಮೇಲೆ ಹೇಳುತ್ತಿದ್ದರೂ ವಲಸಿಗರ ಬಗ್ಗೆ ಬಿಜೆಪಿಯಲ್ಲಿ ಅನುಮಾನಗಳು ಮುಂದುವರಿದಿವೆ ಎನ್ನಲಾಗುತ್ತಿದೆ.
ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ಆಗಾಗ ಬಹಿರಂಗವಾಗಿ ಬೇಸರ ವ್ಯಕ್ತ ಪಡಿಸುತ್ತಿದ್ದು, ಒಂದು ಹಂತದಲ್ಲಿ ಕಾಂಗ್ರೆಸ್ಗೆ ಮರಳಲು ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿತ್ತು.
ಎಚ್.ವಿಶ್ವನಾಥ್ ತಮ್ಮ ಹೇಳಿಕೆಗಳ ಮೂಲಕ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದು, ಮತ್ತೆ ಜೆಡಿಎಸ್ ಸೇರುವ ಮುನ್ಸೂಚನೆ ನೀಡುತ್ತಿದ್ದಾರೆ. ಬಿಜೆಪಿಗೂ ಅವರ ಬಗ್ಗೆ ಆಸಕ್ತಿ ಇದ್ದಂತಿಲ್ಲ. ವಿಧಾನಪರಿಷತ್ ಸದಸ್ಯ ಆರ್. ಶಂಕರ್, ಎಚ್. ನಾಗೇಶ್, ಶ್ರೀಮಂತ ಪಾಟೀಲ್ ಮತ್ತೆ ಸಚಿವ ರಾಗಲು ಕಸರತ್ತು ನಡೆಸಿದ್ದಾರೆ. ಮಹೇಶ್ ಕುಮಟಳ್ಳಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗುವ ಬಗ್ಗೆಯೇ ಸಂಶಯವಿದೆ ಎನ್ನಲಾಗುತ್ತಿದೆ.
ಪಕ್ಷ ನಿಷ್ಠೆಗೆ ಯತ್ನ
ಶಿಸ್ತಿನ ಪಕ್ಷ ಎನ್ನುವ ಬಿಜೆಪಿಯ ಕೆಲವು ನಿಯಮಗಳನ್ನು ಪಾಲಿಸಲು ಅನ್ಯ ಪಕ್ಷಗಳಿಂದ ಬಂದವರಿಗೆ ಕಷ್ಟವಾಗುತ್ತಿದೆ. ಆದರೆ ಪ್ರಮುಖ ರಾಗಿರುವ ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಆನಂದ ಸಿಂಗ್, ಡಾ| ಕೆ. ಸುಧಾಕರ್, ಕೆ.ಸಿ. ನಾರಾಯಣ ಗೌಡ, ಬಿ.ಸಿ. ಪಾಟೀಲ್, ಶಿವರಾಮ ಹೆಬ್ಟಾರ್ ಮೊದಲಾದವರು ಮೂಲ ಬಿಜೆಪಿಯವರಿಗಿಂತಲೂ ಹೆಚ್ಚು ಪಕ್ಷ ನಿಷ್ಠೆ ತೋರುತ್ತಿದ್ದಾರೆ. ಪಕ್ಷದ ಸೂಚನೆಯನ್ನು ಸರಿಯಾಗಿ ಪಾಲಿಸುತ್ತಿದ್ದಾರೆ. ಇದರ ನಡುವೆಯೇ ನಾರಾಯಣ ಗೌಡ, ಸೋಮಶೇಖರ್, ಡಾ| ಸುಧಾಕರ್, ಬೈರತಿ ಬಸವರಾಜ್ ಕಾಂಗ್ರೆಸ್ ನಾಯಕರ ಜತೆ ಸಂಪರ್ಕ ದಲ್ಲಿದ್ದಾರೆ ಎಂಬ ಅನುಮಾನ ಬಿಜೆಪಿಯ ಒಂದು ವರ್ಗದ ನಾಯಕರಲ್ಲಿ ಮೂಡಿದೆ ಎನ್ನಲಾಗಿದೆ.
-ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ