ಬಿಜೆಪಿ ಸರಕಾರ ಡ್ರಗ್ಸ್ ದಂಧೆಯನ್ನು ಟಾರ್ಗೆಟ್ ಮಾಡಲೇ ಇಲ್ಲ: ಮುತಾಲಿಕ್
ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಯಲಿ; ಪಬ್ಗಳಲ್ಲಿ ಡ್ರಗ್ ಸಹಿತ ಇತರ ಮಾಫಿಯಾ ನಡೆಯುತ್ತಿದೆ
Team Udayavani, Sep 4, 2020, 6:02 AM IST
ದಾವಣಗೆರೆ: ಮಂಗಳೂರಿನ 2009ರ ಪಬ್ ಗಲಾಟೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವು ನನ್ನನ್ನು ಮಾತ್ರ ಟಾರ್ಗೆಟ್ ಮಾಡಿ 15 ದಿನ ಜೈಲಿಗೆ ಕಳುಹಿಸಿತು. ಡ್ರಗ್ಸ್ ದಂಧೆಯನ್ನು ಟಾರ್ಗೆಟ್ ಮಾಡಲೇ ಇಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಬ್ಗಳಲ್ಲಿ ಡ್ರಗ್ಸ್ ಹಾಗೂ ಇತರ ಮಾಫಿಯಾ ನಡೆಯುತ್ತಿದೆ ಎಂದು ನಾನು ಬೊಬ್ಬಿರಿದು ಹೇಳಿ ದರೂ ಸರಕಾರ ಕೇಳಲಿಲ್ಲ. ಅದರ ಫಲ ಈಗ ನಮ್ಮ ಮುಂದಿದೆ. ಪೊಲೀಸರು ಮತ್ತು ರಾಜಕಾರಣಿಗಳೇ ರಾಜ್ಯದ ಡ್ರಗ್ಸ್ ದಂಧೆಗೆ ನೇರ ಕಾರಣ. ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಯುವ ಜನತೆ ಬಗ್ಗೆ ಕಾಳಜಿ ಇದ್ದಲ್ಲಿ ಇದರ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದರು.
ಶೋಭಾ ಯಾಕೆ ಮೌನ?
ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ನಲಪಾಡ್ ಮತ್ತು ವಿದ್ವತ್ ನಡುವೆ ಡ್ರಗ್ಸ್ ವಿಚಾರದಲ್ಲೇ ಗಲಾಟೆ ನಡೆದಿತ್ತು ಎಂದು ಆರೋಪಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು ತನಿಖೆಗೆ ಆಗ್ರಹಿಸಿದ್ದರು. ಈಗ ಅವರದ್ದೇ ಬಿಜೆಪಿ ಸರಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ. ಮುಚ್ಚಿ ಹಾಕಿರುವ ನಲಪಾಡ್ ಕೇಸ್ ಅನ್ನು ಮತ್ತೆ ತನಿಖೆ ನಡೆಸಲು ಶೋಭಾ ಆಗ್ರಹಿಸಲಿ ಎಂದು ಮುತಾಲಿಕ್ ಹೇಳಿದರು.
ಎಚ್ಡಿಕೆಯನ್ನು ತನಿಖೆ ನಡೆಸಿ
ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರಕಾರವನ್ನು ಉರುಳಿಸಲು ಡ್ರಗ್ಸ್ ಹಣವನ್ನು ಬಳಸಲಾಗಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ