ಬ್ರಾಹ್ಮಣರ ಓಣಿಯಿಂದ ಹರಿಜನರ ಕೇರಿವರೆಗೆ ಬಿಜೆಪಿ ತಲುಪಿದೆ: ಕಾರಜೋಳ


Team Udayavani, Aug 6, 2019, 3:07 AM IST

bramhanara

ಬೆಂಗಳೂರು: “ಬಿಜೆಪಿ ಯಾವುದೇ ಒಂದು ಜಾತಿ, ಧರ್ಮದ ಪಕ್ಷವಲ್ಲ. ಬಿಜೆಪಿಯು ಮೇಲ್ವರ್ಗ, ಬ್ರಾಹ್ಮಣರ ಪಕ್ಷ ಎಂಬುದಿಲ್ಲ. ಬ್ರಾಹ್ಮಣರ ಓಣಿಯಿಂದ ಹರಿಜನ ಕೇರಿಯವರೆಗೆ ಪಕ್ಷ ತಲುಪಿದೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವ ಯಾವುದೇ ಧರ್ಮ, ಜಾತಿಯವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ಆಗಬೇಕು’ ಎಂದು ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಕರೆ ನೀಡಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸದಸ್ಯತ್ವ ಅಭಿಯಾನದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಇಂದು ಅಲ್ಪಸಂಖ್ಯಾತ ವಿದ್ಯಾವಂತ ಮಹಿಳೆಯರು ಬಿಜೆಪಿ ಸದಸ್ಯರಾಗಲು ಹಾತೊರೆಯುತ್ತಿದ್ದಾರೆ. ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಕಠಿಣ ಶಿಕ್ಷೆಯಂತಿದ್ದ ತ್ರಿವಳಿ ತಲಾಖ್‌ ರದ್ಧುಪಡಿಸಿರುವ ಕ್ರಮವನ್ನು ಬಹಳಷ್ಟು ಮಂದಿ ಮೆಚ್ಚಿದ್ದು, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು.

ಪಕ್ಷವು ಮುಸ್ಲಿಂ, ದೀನ ದಲಿತರು, ಹಿಂದುಳಿದ ವರ್ಗದವರ ವಿರೋಧಿಯಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮುಂದುವರಿಸಬೇಕು ಎಂದು ಮನವಿ ಮಾಡಿದರು. ಈವರೆಗೆ 18.90 ಲಕ್ಷ ಸದಸ್ಯತ್ವ ನೋಂದಣಿಯಾಗಿರುವುದು ಶ್ಲಾಘನೀಯ. ರಾಜ್ಯದಲ್ಲಿ ಇತ್ತೀಚೆಗಿನ ರಾಜಕೀಯ ಬೆಳವಣಿಗೆಯಿಂದ ಸದಸ್ಯತ್ವ ನೋಂದಣಿಗೆ ಹೆಚ್ಚು ಒತ್ತು ನೀಡಲಾಗದ ಕಾರಣ ತುಸು ಹಿನ್ನಡೆಯಾಗಿದೆ.

ಯಾವುದೇ ಪಕ್ಷ ಬಲಾಡ್ಯವಾಗಿರಬೇಕಾದರೆ ಆ ಪಕ್ಷದ ಕಾರ್ಯಕರ್ತರ ಪಡೆ ಬಲವಾಗಿರಬೇಕು ಎಂದರು. ಸಭೆ ಉದ್ಘಾಟಿಸಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶಾಸಕ ಸಿ.ಟಿ.ರವಿ, ಕೇವಲ 10 ಮಂದಿಯಿಂದ ಆರಂಭವಾದ ಪಕ್ಷ ಇಂದು 11 ಕೋಟಿ ಸದಸ್ಯತ್ವ ಹೊಂದಿದ್ದು, ಅತಿ ಹೆಚ್ಚು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಜತೆಗೆ ಅತಿ ಹೆಚ್ಚು ಸಂಸದರನ್ನು ಹೊಂದಿರುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಅರವಿಂದ ಲಿಂಬಾವಳಿ, ದೇಶದ ವಾತಾವರಣ ಕ್ರಮೇಣ ಬದಲಾಗುತ್ತಿದೆ. ದೇಶದ ಸ್ವಾಭಿಮಾನ ಎತ್ತಿ ಹಿಡಿಯುವ ಜತೆಗೆ ಮುಸ್ಲಿಂ ಮಹಿಳೆಯರ ಗೌರವವನ್ನು ರಕ್ಷಿಸುವಂತಹ ಕಾರ್ಯವನ್ನು ಪಕ್ಷ ಮಾಡುತ್ತಿದೆ ಎಂದು ತಿಳಿಸಿದರು. ರಾಜ್ಯ ಸಂಚಾಲಕರಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ರಾಜ್ಯ ಬಿಜೆಪಿ ಕಾರ್ಯದರ್ಶಿ ಭಾರತಿ ಮುಗದಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.