ನಮ್ಮನ್ನು ಎದುರಿಸಲಾಗದ ಬಿಜೆಪಿ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುತ್ತಿದೆ: ಕಾಂಗ್ರೆಸ್
Team Udayavani, Nov 6, 2020, 10:24 AM IST
ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ದಿಕ್ಕುತಪ್ಪಿಸುವ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುವುದು ಬಿಜೆಪಿ ಮೊದಲಿಂದಲೂ ಮೇಲಿನಿಂದ ಕೆಳಗಿನ ನಾಯಕರವರೆಗೂ ರೂಢಿಸಿಕೊಂಡು ಬಂದ ಚಾಳಿ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಐಎಎಸ್ ಅಧಿಕಾರಿ ಡಿ.ಕೆ ರವಿ ಆತ್ಮಹತ್ಯೆಯಲ್ಲಿ ಕರ್ನಾಟಕ ಬಿಜೆಪಿ ನಾಯಕರು ಸುಳ್ಳಿನ ರಾಜಕೀಯ ಮಾಡಿದರು, ಸಿಬಿಐ ತನಿಖೆಯಲ್ಲಿ ಸತ್ಯ ಗೆದ್ದಿತು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆಯಲ್ಲಿ ಕುತಂತ್ರ ರಾಜಕೀಯ ಮಾಡಿದರು ಹೈಕೋರ್ಟಿನಲ್ಲಿ ಸತ್ಯ ಗೆದ್ದಿದೆ. ಈಗ ವಿನಯ್ ಕುಲಕರ್ಣಿ ಅವರನ್ನು ಗುರಿಯಾಗಿಸಿದ್ದಾರೆ, ಸತ್ಯ ಗೆಲ್ಲುವ ವಿಶ್ವಾಸವಿದೆ ಎಂದಿದೆ.
ಕಾಂಗ್ರೆಸ್ ನಾಯಕರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ದಿಕ್ಕುತಪ್ಪಿಸುವ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುವುದು ಬಿಜೆಪಿ ಮೊದಲಿಂದಲೂ ಮೇಲಿನಿಂದ ಕೆಳಗಿನ ನಾಯಕರವರೆಗೂ ರೂಢಿಸಿಕೊಂಡು ಬಂದ ಚಾಳಿ. ಪ್ರತಿ ಬಾರಿಯೂ ಮುಗ್ಗರಿಸಿ ಬಿದ್ದಿದ್ದಾರೆ, ನ್ಯಾಯ ನಮ್ಮದಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಹುಬ್ಬಳ್ಳಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ಗುರುವಾರ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್