BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ
Team Udayavani, Sep 24, 2023, 4:50 PM IST
ಚಿಕ್ಕಮಗಳೂರು : ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ, ಬಿಜೆಪಿ-ಜೆಡಿಎಸ್ ಪಕ್ಷಗಳ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವವೇ ಹೋಗುತ್ತದೆ , ಕಾಂಗ್ರೆಸ್ ಮುಂದೆ ನಾವು ಏನೂ ಇರಲ್ಲ ಅನ್ನಿಸಿದೆ. ಯಾವುದೇ ಕೆಲಸ ಇಲ್ಲದ ಕಾರಣ ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ. ನಾವು ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.
ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ ಎಂದರು.
ಕಾವೇರಿ ನದಿ ನೀರು ವಿವಾದದ ಕುರಿತು ಪ್ರತಿಕ್ರಿಯಿಸಿ, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ. ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು, ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ. ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ