ವಲಸಿಗರ ಗುಂಪು ಛಿದ್ರ: ಬಿಜೆಪಿಗೆ ಅನುಕೂಲ?


Team Udayavani, Aug 12, 2021, 7:00 AM IST

ವಲಸಿಗರ ಗುಂಪು ಛಿದ್ರ: ಬಿಜೆಪಿಗೆ ಅನುಕೂಲ?

ಬೆಂಗಳೂರು: ಹಿಂದಿನ ಮೈತ್ರಿ ಸರಕಾರವನ್ನು ಪತನಗೊಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣ ರಾಗಿದ್ದ ವಲಸಿಗರ ಬಳಗ ಈಗ ಛಿದ್ರವಾಗಿದ್ದು,  ಅಂತರ ಕಾಯ್ದುಕೊಳ್ಳುವ ಲೆಕ್ಕಾಚಾರ ಆರಂಭವಾಗಿದೆ. ಇದು ಬಿಜೆಪಿಗೆ ವರವಾದಂತಿದೆ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ನ 15 ಶಾಸಕರು ಹಾಗೂ ಇಬ್ಬರು ಪಕ್ಷೇ ತರ ಶಾಸಕರು ಮೈತ್ರಿ ಸರಕಾರದ ಪತನ ಮತ್ತು ಅನಂತರ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ಒಟ್ಟಾ ಗಿಯೇ ಇದ್ದರು.  ತಂಡದಲ್ಲಿ ಯಾರಿಗೆ  ಅನ್ಯಾಯವಾದರೂ  ಒಟ್ಟಾಗಿ ಚರ್ಚಿಸುತ್ತಿದ್ದರು. ಈಗ ತಮ್ಮನ್ನು ಬಿಜೆಪಿಗೆ ಕರೆತಂದ ಯಡಿಯೂರಪ್ಪ ಅಧಿಕಾರದಲ್ಲಿಲ್ಲದ ಕಾರಣ ಮತ್ತು ಮಿತ್ರ ಮಂಡಳಿ ಸದಸ್ಯರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಎಲ್ಲರೂ ತಮ್ಮ ರಾಜಕೀಯ ಭವಿಷ್ಯವನ್ನು

ಗಮನದಲ್ಲಿ ಇರಿಸಿಕೊಂಡು ಲೆಕ್ಕಾ ಚಾರದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಾರಕಿಹೊಳಿಯಿಂದ ಅಂತರ :

ಮೈತ್ರಿ ಸರಕಾರದ ವಿರುದ್ಧ ಬಂಡಾಯ ಸಾರಿದ ಸಂದರ್ಭದಲ್ಲಿ ವಲಸಿಗರ ತಂಡದ ನಾಯಕತ್ವ ವಹಿಸಿದ್ದ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕ ವಲಸಿಗರ ತಂಡ ವಿಭಜನೆಯತ್ತ ಸಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕೆಲವರು ಬಿಜೆಪಿಯಲ್ಲೇ ಗಟ್ಟಿ :

ವಲಸಿಗರಲ್ಲಿ ಎಸ್‌.ಟಿ. ಸೋಮ ಶೇಖರ್‌, ಬಿ.ಸಿ. ಪಾಟೀಲ್‌, ಡಾ| ಸುಧಾಕರ್‌, ಬೈರತಿ ಬಸವರಾಜ್‌, ಡಾ| ನಾರಾಯಣ ಗೌಡ, ಮುನಿರತ್ನ ಬಿಜೆಪಿಯಲ್ಲೇ ಗಟ್ಟಿ ನೆಲೆ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆನಂದ್‌ ಸಿಂಗ್‌ರಿಂದಲೂ ದೂರ :

ಮುಂಬಯಿ ಮಿತ್ರ ಮಂಡಳಿ ಸದಸ್ಯರು ಈಗ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಆನಂದ್‌ ಸಿಂಗ್‌ಗೆ ಆಗಿದೆ ಎನ್ನಲಾದ  ಅನ್ಯಾಯದ ವಿಚಾರದಲ್ಲಿಯೂ ಇದೇ ಕಾರಣಕ್ಕೆ ಅಂತರ ಕಾಯ್ದು ಕೊಂಡಿದ್ದಾರೆ ಎನ್ನಲಾಗಿದೆ. ಇದೆಲ್ಲವೂ ಮಿತ್ರ ಮಂಡಳಿ ಹಿಂದಿನ ಒಗ್ಗಟ್ಟಿನಲ್ಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಭವಿಷ್ಯ ಅಗೋಚರ, ಕೆಲವರಿಗೆ ಆತಂಕ :

ಸಚಿವ ಸ್ಥಾನ ಸಿಗದೆ ಬೇಸರಗೊಂಡಿರುವ ಮಹೇಶ್‌ ಕುಮಟಳ್ಳಿ, ಶ್ರೀಮಂತ ಪಾಟೀಲ್‌, ಆರ್‌. ಶಂಕರ್‌,  ರಮೇಶ್‌ ಜಾರಕಿಹೊಳಿ, ಚುನಾವಣೆಯಲ್ಲಿ ಸೋಲುಂಡಿರುವ ಎಂ.ಟಿ.ಬಿ. ನಾಗರಾಜ್‌, ಎಚ್‌. ವಿಶ್ವನಾಥ್‌ ಅವರಿಗೆ ಬಿಜೆಪಿಯಲ್ಲಿ ಭವಿಷ್ಯದ ಆತಂಕ ಆರಂಭವಾಗಿದೆ.

ನನ್ನ ಬಗ್ಗೆ ಎಲ್ಲರೂ ಅನುಕಂಪ ತೋರಿಸು ತ್ತಾರೆ. ಆದರೆ, ಆನಂದ್‌ ಸಿಂಗ್‌ಗೆ ಸೂಕ್ತ ಖಾತೆ ನೀಡಬೇಕಿತ್ತು. ವಲಸಿಗರಲ್ಲಿ ಒಗ್ಗಟ್ಟು ಇಲ್ಲದಿರುವುದಕ್ಕೆ ಹೀಗಾಗುತ್ತಿದೆ.ಪ್ರತಾಪ್‌ ಗೌಡ ಪಾಟೀಲ್‌, ವಲಸಿಗ ಮಾಜಿ ಶಾಸಕ

ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ. ನನ್ನನ್ನು ಎಂಎಲ್‌ಸಿ ಮಾಡಿ ಸಚಿವನನ್ನಾಗಿ ಮಾಡಿದ್ದಾರೆ. ಅಶೋಕ್‌ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ.ಎಂ.ಟಿ.ಬಿ. ನಾಗರಾಜ್‌,  ಪೌರಾಡಳಿತ ಸಚಿವ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.