ಕೈಲಾಗದವನು ಮೈಪರಚಿಕೊಂಡಂತೆ ಆಗಿದೆ ನಿಮ್ಮ ಪರಿಸ್ಥಿತಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್
Team Udayavani, Nov 24, 2020, 4:27 PM IST
ಬೆಂಗಳೂರು: ಶಿರಾ ಸೋಲಿಗೆ ಡಿ ಕೆ ಶಿವಕುಮಾರ್ ಮತ್ತು ನಿಮ್ಮೊಳಗಿರುವ ವೈಮನಸ್ಸೇ ಕಾರಣ ಹೊರತು ಮತದಾರರಲ್ಲ. ಕೈಲಾಗದವನು ಮೈಪರಚಿಕೊಂಡಂತೆ ಆಗಿದೆ ನಿಮ್ಮ ಸದ್ಯದ ಪರಿಸ್ಥಿತಿ. ದೂರುವುದನ್ನು ಬಿಟ್ಟು ಅವಲೋಕನ ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ.
ಮತಗಳನ್ನು ಖರೀದಿ ಮಾಡಿ ಬಿಜೆಪಿ ಶಿರಾದಲ್ಲಿ ಗೆಲುವು ಸಾಧಿಸಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ಕರ್ನಾಟಕ ತನ್ನ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದೆ.
ನಿಮ್ಮ ವೈಫಲ್ಯವನ್ನು ಬೇರೆಯವರ ಹೆಗಲ ಮೇಲೆ ಹಾಕಿ ನುಣುಚಿಕೊಳ್ಳುವ ನಿಮ್ಮ ಪ್ರವೃತ್ತಿಯನ್ನು ಎಂದು ಕೊನೆಗಾಣಿಸುತ್ತೀರಿ ಸಿದ್ದರಾಮಯನವರೇ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ: ವಿಜಯೇಂದ್ರ ವಿರುದ್ಧ ಮಾಜಿ ಸಂಸದ ಉಗ್ರಪ್ಪ ಕಿಡಿ
ಐದು ವರ್ಷ ಮುಖ್ಯಮಂತ್ರಿಯಾಗಿದ್ದ ನೀವು ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತರೂ ಬುದ್ಧಿ ಕಲಿತಿಲ್ಲ. ಮತದಾರರನ್ನು ನಿಂದಿಸುವ ಮಟ್ಟಕ್ಕೆ ನೀವು ಇಳಿದಿರುವುದು ನಿಜಕ್ಕೂ ನಾಚಿಕೆಗೇಡು. ನಿಮ್ಮದೇ ಕಾರ್ಯಕರ್ತರನ್ನು ದೂರಲು ಮನಸ್ಸು ಹೇಗೆ ಬಂತು? ಕಾಂಗ್ರೆಸ್ ಕಾರ್ಯಕರ್ತರು ಆಮಿಷಕ್ಕೆ ಬಲಿಯಾಗಿದ್ದಾರೆ ಎಂದರೆ ಏನರ್ಥ ಎಂದು ಬಿಜೆಪಿ ಪ್ರಶ್ನಿಸಿದೆ.
ಮತಗಳನ್ನು ಖರೀದಿ ಮಾಡಿಯೇ ಶಿರಾ ಉಪಚುನಾವಣೆಯನ್ನು ಗೆದ್ದ ಬಿಜೆಪಿ ಮಸ್ಕಿ ಚುನಾವಣೆಯಲ್ಲೂ ಹಣ ಹಂಚಲು ತಂಡವನ್ನೇ ಕಟ್ಟಿಕೊಂಡು ಬರುತ್ತಾರೆ. ಬಿಜೆಪಿಯವರ ಆಸೆ, ಆಮಿಷಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಲಿಯಾಗಬಾರದು. ಮಾರುಕಟ್ಟೆಯಲ್ಲಿ ಕುರಿ, ಕೋಣಗಳಂತೆ ತನ್ನನ್ನೇ ಮಾರಾಟ ಮಾಡಿಕೊಂಡವರನ್ನು ಮಸ್ಕಿ ಕ್ಷೇತ್ರದ ಜನರು ನಂಬಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು