ಮತ್ತೆ ಯಾಕೆ ಅದೇ ತಪ್ಪು ಮಾಡುತ್ತಿದ್ದೀರಿ: ಬಿಎಸ್ ವೈ ಬೆಂಬಲಕ್ಕೆ ನಿಂತ ಸುಬ್ರಮಣ್ಯನ್ ಸ್ವಾಮಿ
Team Udayavani, Jul 21, 2021, 4:37 PM IST
ಬೆಂಗಳೂರು: ರಾಜ್ಯದ ನಾಯಕತ್ವ ಬದಲಾವಣೆ ವದಂತಿ ವಿಚಾರ ಸದ್ಯ ರಾಷ್ಟ್ರ ಮಟ್ಟದ ಚರ್ಚೆಯ ವಿಷಯವಾಗಿದೆ. ಅನೇಕ ರಾಷ್ಟ್ರೀಯ ನಾಯಕರೂ ಕೂಡಾ ರಾಜ್ಯದ ಬೆಳವಣಿಗೆಯ ಬಗ್ಗೆ ಕಣ್ಣಿಟ್ಟಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದು, ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ. ಅವರಿಲ್ಲದಾಗ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಅವರು ಬಿಜೆಪಿಗೆ ಮರಳಿದ ನಂತರವೇ ಮತ್ತೆ ಗೆಲ್ಲಲು ಸಾಧ್ಯವಾಯಿತು. ಈಗ ಅದೇ ತಪ್ಪನ್ನು ಏಕೆ ಪುನರಾವರ್ತಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನು ಹೇಳಿಲ್ಲ: ಸಿಎಂ ಭೇಟಿಯ ಬಳಿಕ ಸಿದ್ದಗಂಗಾ ಶ್ರೀ
ನಾಯಕತ್ವ ಬದಲಾವಣೆ ವದಂತಿ ಹೆಚ್ಚಾಗುತ್ತಿದ್ದಂತೆ ವಿವಿಧ ಮಠಾಧೀಶರು ಸಿಎಂ ಭೇಟಿಯಾಗುತ್ತಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು, ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮಠಾಧೀಶರು ಆಗ್ರಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?