ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ


Team Udayavani, May 7, 2022, 10:26 AM IST

priyank-kharge

ಬೆಂಗಳೂರು: ಮುಖ್ಯಮಂತ್ರಿಯಾಗಬೇಕಾದರೆ 2500 ಕೋಟಿ ರೂ. ಕೊಡಿ, ಸಚಿವನಾಗಬೇಕಾದರೆ 100 ಕೋಟಿ ರೂ. ಕೊಡಿ ಎಂದು ದೆಹಲಿಯಿಂದ ಬಂದವರು ಹೇಳಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಅಸ್ತ್ರ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಟೀಕೆ ಮುಂದುವರಿಸಿದೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು, ‘ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ’ ಎಂದು ಟೀಕೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಸಿಎಂ ಹುದ್ದೆಗೆ- 2500 ಕೋಟಿ ರೂ., ಪಿಎಸ್ ಐ ಹುದ್ದೆಗೆ- 80 ಲಕ್ಷ ರೂ., ಮಂತ್ರಿಗಿರಿಗೆ- 50-70 ಕೋಟಿ ರೂ., ಕಾಮಗಾರಿಗಳಿಗೆ -40% ಕಮಿಷನ್, ಮಠಗಳಿಗೆ -30% ಕಮೀಷನ್, ವರ್ಗಾವಣೆಗೆ- ಫಿಕ್ಸೆಡ್ ರೇಟ್. ಹೀಗೆ ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ ಎಂದು ದಾಳಿ ನಡೆಸಿದ್ದಾರೆ.

ಆಫರ್ ಬಂದಿತ್ತು: 2500 ಕೋಟಿ ರೂ. ರೆಡಿ ಮಾಡಿಟ್ಟುಕೊಳ್ಳಿ, ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ನನಗೂ ಆಫರ್‌ ಬಂದಿತ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಾಂಬ್‌ ಸ್ಫೋಟ ಮಾಡಿದರು.

ಇದನ್ನೂ ಓದಿ:ಇನ್ನು ಮೂರೇ ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ: ಯಡಿಯೂರಪ್ಪ ಸುಳಿವು

ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಬಂದ ಕೆಲವರು ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಹೇಳಿ 2500 ಕೋಟಿ ರೂ. ತಯಾರಿ ಮಾಡಿಟ್ಟುಕೊಳ್ಳುವಂತೆ ಹೇಳಿದ್ದರು. 2500 ಕೋಟಿ ಎಂದರೆ ಏನು, ಅದೇನು ಸಾಮಾನ್ಯನಾ, ಅಷ್ಟೊಂದು ಹಣವನ್ನು ಯಾವ ಕೊಠಡಿಯಲ್ಲಿ ಇಡುವುದು, ಯಾವ ಗೋದಾಮಿನಲ್ಲಿ ಇಡುವುದು ಅಂತ ಕೇಳಿದೆ. ರಾಜಕಾರಣದಲ್ಲಿ ಅಲ್ಲಿ, ಇಲ್ಲಿ ಹೋಗಿ ಯಾರೂ ಮೋಸ ಹೋಗಬಾರದು. ಟಿಕೆಟ್‌ ಕೊಡುತ್ತೇವೆ, ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂಬ ಆಫರ್‌ ಬರುತ್ತವೆ. ಸೋನಿಯಾ ಗಾಂಧಿ, ಜೆ.ಪಿ.ನಡ್ಡಾ, ಅಮಿತ್‌ ಶಾ ಅವರನ್ನು ಭೇಟಿ ಮಾಡಿಸುವುದಾಗಿ ಮೋಸ ಮಾಡುವ ಕಂಪನಿಗಳು ಇವೆ. ಇಂಥವು ಗಳನ್ನು ಯಾರೂ ನಂಬಬಾರದು. ನಾನು ವಾಜಪೇಯಿ ಕೈಯಲ್ಲಿ ಕೆಲಸ ಮಾಡಿದ್ದೇನೆ. ಆಡ್ವಾಣಿ, ರಾಜನಾಥ ಸಿಂಗ್‌, ಅರುಣ ಜೇಟ್ಲಿ ಅವರು ಬಸನಗೌಡ ಅಂತ ಕರೆಯುತ್ತಿದ್ದರು. ಇಂಥ ವ್ಯಕ್ತಿಗೆ (ಬಸನಗೌಡ) 2500 ಕೋಟಿ ರೂ. ಸಜ್ಜುಗೊಳಿಸಿ ಅಂತ ಹೇಳುತ್ತಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.