ಈಶ್ವರಪ್ಪ ದೂರು ಪ್ರಕರಣ: ಸಿಎಂ ಬಿಎಸ್ ವೈ ಬೆನ್ನಿಗೆ ನಿಂತ ಬಿಜೆಪಿ ಸಚಿವರು, ಶಾಸಕರು!


Team Udayavani, Apr 1, 2021, 2:27 PM IST

ಈಶ್ವರಪ್ಪ ದೂರು ಪ್ರಕರಣ: ಸಿಎಂ ಬಿಎಸ್ ವೈ ಬೆನ್ನಿಗೆ ನಿಂತ ಬಿಜೆಪಿ ಸಚಿವರು, ಶಾಸಕರು!

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿದ್ದಾರೆಂದು ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದ ಬೆನ್ನಲ್ಲೇ, ಸಂಪುಟದ ಸಚಿವರು ಮತ್ತು ಬಿಜೆಪಿ ಶಾಸಕರು ಸಿಎಂ ಬೆನ್ನಿಗೆ ನಿಂತಿದ್ದಾರೆ. ಏನೇ ಸಮಸ್ಯೆಗಳಿದ್ದರೂ ಚರ್ಚೆ ಮಾಡಬೇಕಿತ್ತು, ರಾಜ್ಯಪಾಲರಿಗೆ ದೂರು ನೀಡುವ ಅಗತ್ಯವೇನಿತ್ತು ಎಂದು ಈಶ್ವರಪ್ಪ ನಡೆಯನ್ನು ವಿರೋಧಿಸಿದ್ದಾರೆ.

ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಅದಕ್ಕೂ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ.  ಹಾಗಾಗಿ ವಿಧಿಯಿಲ್ಲದೆ ಸಿಎಂರನ್ನು ಭೇಟಿ ಮಾಡಬೇಕಾಯ್ತು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಅದಲ್ಲದೆ ಸಿಎಂ ಗೆ ಮನವಿ ಮಾಡಿದ್ದ 48 ಶಾಸಕರ ಸಹಿ ಒಳಗೊಂಡ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ಒಳ್ಳೆಯ ಸಂಸ್ಕೃತಿಯಲ್ಲ: ಅಶೋಕ್

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಆರ್.ಅಶೋಕ್, ರಾಜ್ಯಪಾಲರಿಗೆ ಈಶ್ವರಪ್ಪ ಅವರು ದೂರು ಕೊಟ್ಟಿರುವುದು ಮಾಧ್ಯಮಗಳಲ್ಲಿ ನೋಡಿದ್ದೇನೆ . ನಾವು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ನಂತರ ಅಧಿಕಾರಕ್ಕೆ ಬಂದಿದ್ದೇವೆ. ಪಕ್ಷದ ಆಂತರಿಕ ವಿಚಾರ ನಾಲ್ಕು ಗೋಡೆಗಳ ಮಧ್ಯೆ ಇರಬೇಕು. ಈ ಬೆಳವಣಿಗೆ ಒಳ್ಳೆಯದಲ್ಲ. ಶಾಸಕರು ಮನವಿ ಕೊಟ್ಟಿದ್ದಾರೆ. ಅದಲ್ಲದೆ ಅನುದಾನ ಬಿಡುಗಡೆಯಲ್ಲಿ ಮುಖ್ಯಮಂತ್ರಿ ಪರಮಾಧಿಕಾರ. ಸಿಎಂ ಜೊತೆಗೆ ಕೂತು ಮಾತಾಡಿಕೊಳ್ಳಬಹುದಿತ್ತು, ಇದು ಒಳ್ಳೆಯ ಸಂಸ್ಕೃತಿ ಅಲ್ಲ ಎಂದಿದ್ದಾರೆ.

ಶೋಭೆಯಲ್ಲ: ಬಿ.ಸಿ.ಪಾಟೀಲ್

ಈಶ್ವರಪ್ಪ ಅವರು ಹಿರಿಯ ನಾಯಕರು. ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ಶೋಭೆಯಲ್ಲ. ಮುಖ್ಯಮಂತ್ರಿಯವರನ್ನು ಅಪರಾಧಿ ಸ್ಥಾನದಲ್ಲಿ ನೋಡುವವರಿಗೆ ಆಹಾರ ಮಾಡುವುದು ಬೇಡ. ಶಾಸಕರು ಅನುದಾನ ಕೇಳಿದ್ದಾರೆ ಅದಕ್ಕೆ ಅವರು ಹಣ ಬಿಡುಗಡೆ ಮಾಡಿದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಅವರು ಹೇಳಿದ್ದಾರೆ.

ಕೂತು ಚರ್ಚೆ ಮಾಡಿಕೊಳ್ಳಬೇಕು: ಬೊಮ್ಮಾಯಿ

ಬ್ಯುಸಿನೆಸ್ ಟ್ರ್ಯಾನ್ಸಾಕ್ಷನ್ ಮಾಡುವ ಅಧಿಕಾರ ಸಿಎಂಗಿದೆ. ಇದರ ಹಿನ್ನೆಲೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಕೋವಿಡ್, ನೆರೆ ಎಲ್ಲಾ ಬಂದಿತ್ತು. ಕೋವಿಡ್ ಸಂಧರ್ಭದಲ್ಲಿ ಹಣಕಾಸಿನ ತೊಂದರೆ ಇತ್ತು ಯಾವುದೇ ಸಹಾಯ ಮಾಡಲಾಗಿಲ್ಲ.  ಅಭಿವೃದ್ಧಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅಗತ್ಯಕ್ಕೆ ತಕ್ಕಂತೆ ಹಣ ಬಿಡುಗಡೆ ಮಾಡಿದ್ದಾರೆ. ಈಶ್ವರಪ್ಪ ಅವರ ಇಲಾಖೆಯಲ್ಲಿ ಆಕ್ಷೇಪ ಇದ್ದರೆ ಮುಖ್ಯಮಂತ್ರಿಗಳ ಜೊತೆಗೆ ಕೂತು ಚರ್ಚೆ ಮಾಡಿಕೊಳ್ಳಬೇಕು. ಈ ವಿಚಾರ ನಮ್ಮ ಸರ್ಕಾರದ ಒಳಗೆ ಚರ್ಚೆ ಮಾಡಿಕೊಳ್ಳಬೇಕು. ರಾಜ್ಯಪಾಲರ ಬಳಿ ಹೋಗುವ ಅವಶ್ಯಕತೆ ಇರಲಿಲ್ಲ. ಬಿಜೆಪಿ ಶಿಸ್ತಿನ ಪಕ್ಷ ಹೀಗೆ ಆಗಬಾರದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಯಡಿಯೂರಪ್ಪ ನಮ್ಮ ಅಗ್ರಮಾನ್ಯ ನಾಯಕ; ಸುಧಾಕರ್

ನಾವು ಎಲ್ಲಾ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರು. ಯಡಿಯೂರಪ್ಪ ಅವರು ನಮ್ಮ ಅಗ್ರಮಾನ್ಯ ನಾಯಕ. ಬಿಜೆಪಿ ಎಲ್ಲಾ ನಾಯಕರು ಸರ್ವಾನುಮತದಿಂದ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಿ ಆ ಕುರ್ಚಿ ಮೇಲೆ ಕೂರಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಯಾವುದೇ ಇಲಾಖೆಯ ಮಾಹಿತಿ ತರಿಸಿಕೊಳ್ಳಬಹುದು ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಇದು ಸರ್ಕಾರಕ್ಕೆ, ಪಕ್ಷಕ್ಕೆ, ವೈಯಕ್ತಿಕವಾಗಿ ಅವರಿಗೂ ಮುಜುಗರ ತರಿಸುವ ವಿಚಾರ. ಜನರಿಗೆ ಪರವಾಗಿ ಆಡಳಿತ ನೀಡುವ ಕಡೆ ನಾವು ಗಮನ ಕೊಡಬೇಕು.  ಇದೆಲ್ಲವನ್ನು ನೋಡಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವುದಿಲ್ಲ.  ಬಹಿರಂಗ ಮಾಡಿ ನಮ್ಮನೇ ನಾವು ದುರ್ಬಲ ಮಾಡಿಕೊಳ್ಳಬಾರದು. ಮುಖ್ಯಮಂತ್ರಿ ಅವರನ್ನು ದುರ್ಬಲಗೊಳಿಸುವ ಉದ್ದೇಶ ಈಶ್ವರಪ್ಪನವರಿಗೆ ಇಲ್ಲ ಎಂದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.