ಮತ್ತೆ ಅಸಮಾಧಾನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲು 20ಕ್ಕೂ ಹೆಚ್ಚು ಶಾಸಕರಿಂದ ಆಗ್ರಹ!
Team Udayavani, Mar 18, 2021, 3:54 PM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಕೆಲವರು ಶಾಸಕರು ಅಸಮಾಧಾನಗೊಂಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹಾಕಿದ್ದಾರೆ.
ಇಂದು ವಿಧಾನಸೌಧದಲ್ಲಿ ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆಸಿದ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು, ಶಾಸಕಾಂಗ ಪಕ್ಷದ ಸಭೆ ಕರೆಯಲು ಸಿಎಂ ಗೆ ಮನವಿ ಮಾಡಿದ್ದಾರೆ. ಇಂದು ಸಂಜೆ ಅಧಿಕೃತ ನಿವಾಸಕ್ಕೆ ಬರುವಂತೆ ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಕೆಲವು ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಪತ್ರ ಬರೆಯಲು ತಿರ್ಮಾನ ಮಾಡಲಾಗಿದೆ.
ಇದನ್ನೂ ಓದಿ:ಕೋವಿಡ್ ಕೆಲಸ ಮಾಡುವವರಿಗೆ ಇಂದಿನಿಂದ 50 ದಿನಗಳವರೆಗೆ ರಜೆ ಇಲ್ಲ: ಸಚಿವ ಸುಧಾಕರ್
ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅನುದಾನ ಸಿಗದ ಕಾರಣ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಹೋಗಲು ಆಗದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ ಅನುದಾನವೇ ಕೊಟ್ಟಿಲ್ಲ ಎಂದು ಶಾಸಕರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರಿಂದ ಮತ್ತೆ ಅಸಮಾಧಾನ ಕೇಳಿಬಂದಿದೆ. ಉಪ ಚುನಾವಣೆ ವಿಚಾರದ ಬಗ್ಗೆಯೂ ಚರ್ಚಿಸಲು ಶಾಸಕಾಂಗ ಸಭೆಗ ಕರೆಯಲು ಆಗ್ರಹಿಸಿದ್ದಾರೆ. ಸದ್ಯ ಸಿಎಂ ಇಂದು ಸಂಜೆ ಅಧಿಕೃತ ನಿವಾಸಕ್ಕೆ ಬರುವಂತೆ ಈ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಜಾರಕಿಹೊಳಿಯವರಿಂದ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಯುವತಿ ಕೇಳಿದ್ದಳು: CD ಶಂಕಿತ ನರೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್