ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ: ಖಂಡ್ರೆ
Team Udayavani, Jan 12, 2019, 7:09 AM IST
ಬೆಂಗಳೂರು: “ಸಂಕ್ರಾಂತಿ ನಂತರ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಆದರೆ, ಬಿಜೆಪಿಯ ಶಾಸಕರು ನಿರಂತರ ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, “ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಸಾಕಷ್ಟು ಪ್ರಯತ್ನ ಮಾಡಿದ್ದರು.
ಆದರೆ, ಅವರು ಯಶಸ್ವಿಯಾಗಿರಲಿಲ್ಲ. ಈಗ ತಲೆ ಕೆಳಗೆ ಹಾಕಿ ಕಾಲು ಮೇಲೆ ಮಾಡಿದರೂ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು. “ದೇಶದಲ್ಲಿ ಬಿಜೆಪಿ ದುರ್ಬಲವಾಗಿದೆ. ಬಿಜೆಪಿಯ ಅನೇಕ ಶಾಸಕರೇ ವೈಯಕ್ತಿಕವಾಗಿ ನನ್ನ ಸಂಪರ್ಕದಲ್ಲಿದ್ದಾರೆ. ಎಷ್ಟು ಜನ ನನ್ನ ಜತೆ ಸಂಪರ್ಕದಲ್ಲಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಬಿಜೆಪಿಯವರು 24 ಗಂಟೆಯಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದರು.
ರಮೇಶ್ ಜಾರಕಿಹೊಳಿ ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಎನ್ನುವುದು ಊಹಾಪೋಹ. ಅವರ ಅಸಮಾಧಾನ ಕಾಲ ಕ್ರಮೇಣ ಸರಿಹೋಗಲಿದೆ. ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ’ ಎಂದು ಹೇಳಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ. ಈಗಾಗಲೇ ಪ್ರಕರಣವನ್ನು ಎಸಿಬಿಗೆ ವಹಿಸಲಾಗಿದೆ. ಈ ಹಿಂದೆ ಡಿ.ಕೆ.ರವಿ ಪ್ರಕರಣದಲ್ಲಿ ಏನಾಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಯಾಗಲಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು