ಜೆಡಿಎಸ್ನ ಆರು ಶಾಸಕರಿಗೆ ಬಿಜೆಪಿ ಗಾಳ?
Team Udayavani, Nov 9, 2017, 9:31 AM IST
ಬೆಂಗಳೂರು: ಜೆಡಿಎಸ್ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಹೊಸ್ತಿಲಲ್ಲಿರುವ ಬೆನ್ನಲ್ಲೇ ಇನ್ನೂ ಆರು ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ರಾಯಚೂರಿನ ಶಿವರಾಜ್ ಪಾಟೀಲ್, ಲಿಂಗಸಗೂರಿನ ಮಾನಪ್ಪ ವಜ್ಜಲ್, ಅರಸೀಕೆರೆಯ ಶಿವಲಿಂಗೇಗೌಡ, ನೆಲಮಂಗಲದ ಡಾ.ಶ್ರೀನಿವಾಸಮೂರ್ತಿ, ದೇವನಹಳ್ಳಿಯ ಪಿಳ್ಳಮುನಿಶಾಮಪ್ಪ, ಭದ್ರಾವತಿಯ ಅಪ್ಪಾಜಿ ಅವರನ್ನು ಸೆಳೆಯಲು ಮಾತುಕತೆ ನಡೆಸಲಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಸಿ.ಪಿ.ಯೋಗೇಶ್ವರ್ ಅವರು ಜೆಡಿಎಸ್ ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಶಕ್ತಿ ಕಡಿಮೆ ಇರುವ ಕ್ಷೇತ್ರಗಳಲ್ಲಿ ಸ್ವಂತ ವರ್ಚಸ್ಸು ಇರುವ ನಾಯಕರನ್ನು ಕರೆ ತಂದು ಬಿಜೆಪಿ ಟಿಕೆಟ್ ಕೊಟ್ಟು ಗೆಲ್ಲಿಸಿ ಸಂಖ್ಯಾಶಕ್ತಿ ವೃದ್ಧಿಸಿಕೊಳ್ಳಲು ಈ ತಂತ್ರ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಜೆಡಿಎಸ್ ಮೂಲಗಳ ಪ್ರಕಾರ ಇವೆಲ್ಲವೂ ವದಂತಿ. ಯಾರೂ ಬಿಜೆಪಿ ಸೇರುವುದಿಲ್ಲ. ಪಕ್ಷದ ವರ್ಚಸ್ಸು ಕುಗ್ಗಿಸಲು ನಡೆಸುತ್ತಿರುವ ಪಿತೂರಿ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು