ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ
Team Udayavani, Mar 21, 2023, 6:51 AM IST
ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಗುರುಮಿಠಕಲ್ ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರಗಳಿಂದ 5 ಸಲ ಶಾಸಕರಾಗಿದ್ದ ಆಯ್ಕೆಯಾಗಿದ್ದ ಚಿಂಚನಸೂರ್ ಅವರು ಕಳೆದ 2018ರ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು.
ಕಾಂಗ್ರೆಸ್ನಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ಗೆ ಸೇರಿದ ಕಾರಣ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆಗ ಆ ಸ್ಥಾನಕ್ಕೆ ಬಿಜೆಪಿಯು ಚಿಂಚನಸೂರ್ ಅವರನ್ನು ಪರಿಷತ್ತಿಗೆ ಕಳಹಿಸಿತ್ತು. ಇವರ ಅವಧಿ 2024ರ ವರೆಗೂ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು