ಮಂತ್ರಿ ಮಾಡ್ತೀನಿ ಎಂದು ಹೇಳಿ ಮಾತು ತಪ್ಪಿದ್ದೀರಿ: ಸ್ವಪಕ್ಷದ ವಿರುದ್ಧ ಆರ್.ಶಂಕರ್ ಆಕ್ರೋಶ
Team Udayavani, Sep 14, 2022, 12:20 PM IST
ಬೆಂಗಳೂರು : ಮಂತ್ರಿ ಮಾಡ್ತೀನಿ ಎಂದು ಹೇಳಿ ಮಾತು ತಪ್ಪಿದ್ದೀರಿ ಎಂದು ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಂಕರ್ ಬೇಸರ ವ್ಯಕ್ತಪಡಿಸಿದ್ದಾರೆ.
ಆಗ ಕಿವಿ ಮಾತು ಹೇಳುವುದಕ್ಕೆ ಹೋದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆಯೂ ಶಂಕರ್ ಬೇಸರಗೊಂಡರು.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಕಂದಕಕ್ಕೆ ಉರುಳಿದ ಬಸ್ : 9 ಮಂದಿ ಸಾವು, ಹಲವರಿಗೆ ಗಾಯ
ಇದೇ ರೀತಿ ಆದರೆ ನನ್ನ ಮುಂದಿನ ರಾಜಕೀಯ ಭವಿಷ್ಯ ಏನಾಗಬೇಕು ? ನೀವು ಮಾಡಿದ್ದು ಸರಿನಾ ? ನನಗೆ ನಂಬಿಸಿ ಮೋಸ ಮಾಡಿದರಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆರ್.ಶಂಕರ್ ವಾಗ್ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ನೀವು ಇನ್ನೂ ಸಂಪುಟ ವಿಸ್ತರಣೆ ಮಾಡಿಲ್ಲ, ನಾನು ಕ್ಷೇತ್ರವನ್ನೂ ಕಳೆದುಕೊಂಡಿದ್ದೇನೆ ಎಂದಾಗ ಸಮಾಧಾನಪಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ