By-Elections; ಸುರಪುರ ಉಪಸಮರದಲ್ಲಿ ರಾಜೂಗೌಡ ಬಿಜೆಪಿ ಅಭ್ಯರ್ಥಿ
Team Udayavani, Mar 26, 2024, 11:02 PM IST
ಬೆಂಗಳೂರು: ಸುರಪುರ ವಿಧಾನ ಸಭಾ ಉಪಚುನಾವಣೆಗೆ ನಿರೀಕ್ಷೆಯಂತೆ ರಾಜಾ ನರಸಿಂಹ ನಾಯಕ (ರಾಜೂಗೌಡ) ಅವರ ಹೆಸರನ್ನು ಬಿಜೆಪಿ ಘೋಷಿಸಿದೆ.
ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಅವರ ಪುತ್ರ ರಾಜಾ ವೇಣುಗೋ ಪಾಲ ನಾಯಕ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿದ್ದು, ಕಳೆದ ಚುನಾವಣೆಯಲ್ಲಿ ವೆಂಕಟಪ್ಪ ನಾಯಕ ವಿರುದ್ಧ ಸೋತಿದ್ದ ರಾಜೂ ಗೌಡರನ್ನೇ ಬಿಜೆಪಿ ಮತ್ತೆ ಅಖಾಡಕ್ಕಿಳಿಸಿದೆ.
2023 ರ ಚುನಾವಣೆಯಲ್ಲಿ ಬಿಜೆಪಿಯ ರಾಜೂಗೌಡ ಪರವಾಗಿ 88,336 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ 1,13,559 ಮತ ಗಳಿಸಿ 25,223 ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಬೇಕಿದ್ದ ರಾಜೂಗೌಡ ಸುರಪುರ ವಿಧಾನಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿ ದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಸಾವಿನ ನಂತರ ವೇಣುಗೋಪಾಲ ನಾಯಕ ಅವರಿಗೆ ಕ್ಷೇತ್ರದಲ್ಲಿ ಒಂದು ರೀತಿ ಅನುಕಂಪವಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಆಡಳಿತದಲ್ಲಿರುವು ದರಿಂದ ಈ ಕ್ಷೇತ್ರವನ್ನು ಬಿಟ್ಟುಕೊಡದೆ ಪ್ರತಿಷ್ಠೆಯಾಗಿಯೂ ಸ್ವೀಕರಿಸ ಬಹುದು. ಅದೇ ರೀತಿ ಕಳೆದ ವಿಧಾನಸಭೆ ಚುನಾ ವಣೆಯಲ್ಲಿ ಸೋಲುಂಡ ರಾಜೂಗೌಡ ಪರವಾಗಿಯೂ ಮತದಾರರ ಅನುಕಂಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ