ಬಿಜೆಪಿ ಆಂತರಿಕ ಬೇಗುದಿ:  ಬೊಮ್ಮಾಯಿ ದಿಲ್ಲಿಗೆ


Team Udayavani, May 8, 2021, 6:50 AM IST

ಬಿಜೆಪಿ ಆಂತರಿಕ ಬೇಗುದಿ:  ಬೊಮ್ಮಾಯಿ ದಿಲ್ಲಿಗೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ನಡುವೆಯೇ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿಯೂ ಹೆಚ್ಚಾಗುತ್ತಿದೆ. ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಹಾಗೂ ಆಡಳಿತಾತ್ಮಕ ಬೆಳವಣಿಗೆಗಳ ಬಗ್ಗೆ ವಿವರಣೆ ನೀಡಲು ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ  ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು  ದಿಲ್ಲಿಗೆ  ತೆರಳಿದ್ದಾರೆ.

ಉಪ ಚುನಾವಣೆ ಫ‌ಲಿತಾಂಶ, ಚಾಮರಾಜ ನಗರದಲ್ಲಿ ಆಕ್ಸಿಜನ್‌ ದೊರೆಯದೆ  ರೋಗಿಗಳು ಸಾವೀಗೀಡಾದ  ಪ್ರಕರಣ ಹಾಗೂ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್‌ ಪ್ರಕರಣದ ಬಗ್ಗೆ ಬಿಜೆಪಿ ಹೈಕಮಾಂಡ್‌ ಬೇಸರಗೊಂಡಿದೆ ಎನ್ನಲಾಗಿದೆ.

ಉಪ ಚುನಾವಣೆ ಫ‌ಲಿತಾಂಶ, ಕೊರೊನಾ ನಿರ್ವಹಣೆ ಹಾಗೂ ಚಾಮರಾಜನಗರ ದುರಂತ ಸಂಬಂಧಿಸಿ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಸರಕಾರದ ವಿರುದ್ಧ ಮಾತನಾಡಿದ್ದರು.  ಜತೆಗೆ ಅಧ್ಯಕ್ಷ  ಜೆ.ಪಿ. ನಡ್ಡಾರಿಗೆ ವರದಿಯನ್ನೂ ನೀಡಿದ್ದರು ಎಂದು ಹೇಳಲಾಗಿತ್ತು.

ತೇಜಸ್ವಿ ಸೂರ್ಯ ಅಚ್ಚರಿ :

ಈ ಬೆಳವಣಿಗೆಯ ಬೆನ್ನಲ್ಲೇ  ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ನಗರ ಶಾಸಕರು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಪಕವಾಗಿ ಬೆಡ್‌ ಬ್ಲಾಕಿಂಗ್‌ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಅವರ ಆರೋಪ ಕೇವಲ ಒಂದು ಕೋಮಿನವರ ವಿರುದ್ಧವಾಗಿದ್ದರೂ, ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರ ಸರಿಯಾಗಿ ಕೊರೊನಾ ನಿಯಂತ್ರಿಸಲು ವಿಫ‌ಲರಾಗಿದ್ದಾರೆ ಎನ್ನುವುದನ್ನೇ ಬಿಂಬಿಸುವುದಾಗಿತ್ತು ಎನ್ನಲಾಗುತ್ತಿದೆ.  ಈ ಎಲ್ಲ ಕಾರಣಗಳಿಂದ ಸಿಎಂ ಅವರು  ಸರಕಾರ ಕೈಗೊಂಡಿರುವ ಕ್ರಮಗಳನ್ನು ವರಿಷ್ಠರಿಗೆ ತಿಳಿಸಲು ಬೊಮ್ಮಾಯಿ ಹಾಗೂ ವಿಜಯೇಂದ್ರರನ್ನು ದಿಲ್ಲಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಆಕ್ಸಿಜನ್‌ ವಿಚಾರ ಚರ್ಚೆಗೆ? :

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬೇಡಿಕೆಯಷ್ಟು  ಆಕ್ಸಿಜನ್‌ ನೀಡುವ ಕುರಿತು ಉಂಟಾದ ಗೊಂದಲದ ಬಗ್ಗೆ ಚರ್ಚಿಸಲು ಗೃಹ ಮತ್ತು ಕಾನೂನು ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರಕಾರದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ ಅವರು ದಿಲ್ಲಿಗೆ ತೆರಳಿದ್ದಾರೆ ಎಂದು ಗೃಹ ಸಚಿವರ ಆಪ್ತ ಮೂಲಗಳು ತಿಳಿಸಿವೆ.

ಸರಕಾರ 1,700 ಟನ್‌ ಆಕ್ಷಿಜನ್‌ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಹೈಕೋರ್ಟ್‌ ಸಹ ರಾಜ್ಯಕ್ಕೆ 1,200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಒದಗಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ಇದರ ವಿರುದ್ಧ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಹೋಗಿತ್ತು. ಸುಪ್ರೀಂ ಕೋರ್ಟ್‌ ಈ ಬಗ್ಗೆ ರಾಜ್ಯದ ಅಗತ್ಯವನ್ನು ಪೂರೈಸುವಂತೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆ ಮೇರೆಗೆ ಗೃಹ ಸಚಿವರು ದಿಲ್ಲಿಗೆ ತೆರಳಿದ್ದಾರೆ ಎಂದೂ ಹೇಳಲಾಗುತ್ತಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.