ಎಲ್ಲದರಲ್ಲೂ ಬಿಜೆಪಿ ರಾಜಕಾರಣ: ಪರಮೇಶ್ವರ್
Team Udayavani, Apr 30, 2019, 3:00 AM IST
ಬೆಂಗಳೂರು: ಬಿಜೆಪಿಯವರು ಎಲ್ಲದರಲ್ಲಿಯೂ ರಾಜಕಾರಣ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಭೀಕರ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಇದೆ. ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳಲು ಸಭೆ ನಡೆಸುವುದು ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪೀಡಿತ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಭೆ ಮಾಡಲು ಅವಕಾಶ ನೀಡುವಂತೆ ಚುನಾವಣಾ ಆಯೋಗಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಈಗಾಗಲೇ ಹೊಸ ಟೆಂಡರ್ ಹಾಗೂ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಯೋಗ ಅನುಮತಿ ನೀಡಿದೆ.
ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಲು ಆಯೋಗ ಅನುಮತಿ ನೀಡಿಲ್ಲ. ಆಯೋಗದ ಅನುಮತಿ ಬಂದ ನಂತರ ಸಭೆ ನಡೆಸುತ್ತೇವೆ. ಬಿಜೆಪಿಯವರು ಇದರಲ್ಲಿಯೂ ರಾಜಕಾರಣ ಮಾಡುತ್ತಾರೆ. ಬಿಜೆಪಿಯವರು ಚುನಾವಣಾ ಆಯೋಗಕ್ಕೆ ಬಹಳ ಹತ್ತಿರವಾಗಿದ್ದಾರೆ. ಅವರು ಆಯೋಗಕ್ಕೆ ಹೇಳಿಸಿದರೆ, ನಾವು ನಮ್ಮ ಕೆಲಸ ಆರಂಭಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ, ಶಾಸಕ ಎಸ್.ಟಿ.ಸೋಮಶೇಖರ್ ಅವರು ಬಿಡಿಎಯಲ್ಲಿ ತಾವು ಡಮ್ಮಿ ಪೀಸ್ ಎಂದು ಹೇಳಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಅರ್ಥದಲ್ಲಿ ಸೋಮಶೇಖರ್ ಹಾಗೆ ಹೇಳಿದ್ದಾರೆಯೋ ಗೊತ್ತಿಲ್ಲ. ಸಮಾನ ಮನಸ್ಕ ಶಾಸಕರು ಒಂದು ಕಡೆ ಸೇರಿ ಊಟ ಮಾಡುವುದು ತಪ್ಪಲ್ಲ. ಅವರು ಸಭೆ ಸೇರಿ ಚುನಾವಣೆ ಬಗ್ಗೆ ವಿಶ್ಲೇಷಣೆ ಮಾಡಬಹುದು.
ಈ ಬಗ್ಗೆ ನಾನು ಎಸ್.ಟಿ.ಸೋಮಶೇಖರ್ ಜೊತೆ ಮಾತನಾಡಿದ್ದೇನೆ. ಅವರು ಚುನಾವಣೆ ವಿಶ್ಲೇಷಣೆ ಮಾಡಲು ಸಭೆ ಸೇರುತ್ತಿದ್ದೇವೆ. ಅದು ಸರ್ಕಾರದ ವಿರುದ್ಧವಾಗಲಿ, ಯಾವುದೇ ವ್ಯಕ್ತಿಯ ವಿರುದ್ಧವಾಗಲಿ ಅಲ್ಲ ಎಂದು ಹೇಳಿದ್ದಾರೆ. ಆದರೂ, ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ