ಸಪ್ತ ಜನೋತ್ಸವ: 50 ಕ್ಷೇತ್ರಗಳಲ್ಲಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸ


Team Udayavani, Aug 18, 2022, 8:10 AM IST

tdy-28

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿ ಸಿದ್ಧತೆಗಳನ್ನು ಆರಂಭಿಸಿದೆ. ಮುಂದಿನ ತಿಂಗಳ ಮೊದಲ ವಾರದಿಂದ ಅಕ್ಟೋಬರ್‌ ಮಧ್ಯಭಾಗದ ವರೆಗೆ ರಾಜ್ಯದ 7 ಕಡೆ ಬೃಹತ್‌ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲು ಪಕ್ಷ ನಿರ್ಧರಿಸಿದೆ.

ಗುರುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ರಾಜ್ಯದ ಏಳು ಕಡೆ ಜನೋತ್ಸವ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಸೆಪ್ಟಂಬರ್‌ನಲ್ಲಿ ಮೊದಲ ಸಮಾವೇಶ ನಡೆಯಲಿದೆ ಎಂದು ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್‌ ಮಾಧ್ಯಮಗಳಿಗೆ ತಿಳಿಸಿದರು.

ಮುಂದಿನ ಒಂದು ತಿಂಗಳು ಅವಧಿಯಲ್ಲಿ ನಡೆಸಬೇಕಾಗಿರುವ ರಾಜ್ಯ ಪ್ರವಾಸಗಳ ಕುರಿತು ನಿರ್ಧರಿಸಲಾಯಿತು. ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರು ತಲಾ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕು ಎಂಬುದಾಗಿ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕಾರ್ಯಕಾರಿಣಿ:

ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ಸೆ. 10 ಮತ್ತು 11ರಂದು ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. 3 ತಿಂಗಳಿಗೊಮ್ಮೆ ಈ ಕಾರ್ಯಕಾರಿಣಿ ನಡೆಯುತ್ತಿದೆ. ರಾಜ್ಯದಲ್ಲಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಪ್ರಧಾನಿ ಮೋದಿಯವರ ಪಂಚ ಸಂಕಲ್ಪಗಳು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಯೋಜನೆಗಳನ್ನು ಬಳಸಿಕೊಳ್ಳಬೇಕು. ಈ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಲಾಗಿದೆ ಎಂದರು.

ಪಕ್ಷಕ್ಕೆ ಆನೆಬಲ:

ಕೇಂದ್ರದ ಸಂಸದೀಯ ಮಂಡಳಿ ಮತ್ತು ಚುನಾವಣ ಸಮಿತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರ ನೇಮಕವನ್ನು ಸಭೆಯು ಒಕ್ಕೊರಲಿನಿಂದ ಸ್ವಾಗತಿಸಿದೆ. ಇದರಿಂದ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ರಾಜ್ಯ ರಾಜಕೀಯದಲ್ಲಿ ಮಹತ್ತರ ಸಾಧನೆ ಮಾಡುವ ಅವಕಾಶ ಇದರಿಂದ ಒದಗಿದೆ ಎಂಬುದಾಗಿ ಅರುಣ್‌ ಸಿಂಗ್‌ ತಿಳಿಸಿದರು ಎಂದು ಅವರು ವಿವರಿಸಿದರು.

ರಾಜ್ಯದ ಪ್ರತೀ ಬೂತನ್ನು ಕನಿಷ್ಠ 50ಕ್ಕೂ ಹೆಚ್ಚು ಮತ ಪಡೆಯುವ ಬೂತ್‌ ಆಗಿ ಪರಿವರ್ತಿಸಬೇಕು. ಅದಕ್ಕಾಗಿ ರಾಜ್ಯ- ಜಿಲ್ಲಾ  ಪದಾಧಿಕಾರಿಗಳು ತಿಂಗಳಿಗೆ 15 ದಿನ ಪ್ರವಾಸ ಮಾಡಲು ಅರುಣ್‌ ಸಿಂಗ್‌ ಸೂಚಿಸಿರುವುದಾಗಿ ಹೇಳಿದರು.

ಸಭೆಯಲ್ಲಿ ಪ್ರಸ್ತುತ ವಿದ್ಯಮಾನಗಳ ಕುರಿತು ವಿವರಿಸಿದ್ದಾ ಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಕಾಂಗ್ರೆಸ್‌ ಮತಬ್ಯಾಂಕ್‌ ರಾಜಕೀಯಕ್ಕಾಗಿ ವೀರ ಸಾವರ್ಕರ್‌ ಅವರನ್ನು ಅವಹೇಳನ ಮಾಡುವುದು ಖಂಡನೀಯ ಕಾಂಗ್ರೆಸ್‌ ವೀರ ಸಾವರ್ಕರ್‌ ಅವರ ಬಗ್ಗೆ ಅನುಸರಿಸುತ್ತಿರುವ ನಿಲುವನ್ನು ಸಭೆ ಅತ್ಯುಗ್ರವಾಗಿ ಖಂಡಿಸಿತು ಎಂದರು.

ಬಿಎಸ್‌ವೈ ಮಾರ್ಗದರ್ಶನದಲ್ಲಿ ಚುನಾವಣೆ:

ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಸೇರ್ಪಡೆ ಮಾಡಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಅವರ ಮಾರ್ಗದರ್ಶನದಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾದವರು. ಮೂರು ಬಾರಿ ವಿಪಕ್ಷ ನಾಯಕರಾಗಿದ್ದರು. ಪಕ್ಷದ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವುದರಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಮತ್ತು ಲಾಭ ಒದಗಿದೆ. ಅವರಿಂದ ಕರ್ನಾಟಕವಲ್ಲದೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿಯ ಯಶಸ್ಸಿಗೆ ನೆರವು ಸಿಗಲಿದೆ. ಅವರ ಮಾರ್ಗದರ್ಶನದಲ್ಲಿ ನಾವು ಸಾಗುತ್ತೇವೆ ಎಂದು ತಿಳಿಸಿದರು. 2023ರ ಚುನಾವಣೆಯಲ್ಲಿ ಪಕ್ಷಕ್ಕೆ ಯಡಿಯೂರಪ್ಪ ಅನಿವಾರ್ಯ ಎನ್ನುವುದು ಗೊತ್ತಿರುವ ವಿಷಯ. ಅವರಿಂದ ಸಾಕಷ್ಟು ಮಾರ್ಗದರ್ಶನ ಪಡೆಯುತ್ತೇವೆ ಎಂದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.