ರಾಜ್ಯದಲ್ಲಿ ಯುಪಿ ಮಾದರಿ ಚುನಾವಣೆಗೆ ಬಿಜೆಪಿ ಸಿದ್ಧತೆ


Team Udayavani, Apr 29, 2022, 6:50 AM IST

Untitled-1

ಬೆಂಗಳೂರು: ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ  ಮರಳಿ ಅಧಿಕಾರ ಪಡೆದಿರುವ ಬಿಜೆಪಿ, ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಲು  ನಿರ್ಧರಿಸಿದೆ. ಅದಕ್ಕಾಗಿ ಅಭಿವೃದ್ಧಿ ಮಂತ್ರವನ್ನೇ ಮುಂದಿಟ್ಟುಕೊಂಡು “ಸೈಲೆಂಟ್‌ ಓಟರ್‌’ಗಳನ್ನು ಗಟ್ಟಿಗೊಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ.

ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ  ಬಿಜೆಪಿ ಮೂರಂಕಿ ಮುಟ್ಟುವುದು  ಕಷ್ಟ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಲಭ್ಯವಾಗಿದ್ದು,  150 ಸ್ಥಾನಗಳ ಗುರಿ ಮುಟ್ಟಲು ಉತ್ತರ ಪ್ರದೇಶ ಮಾದರಿ ಅನುಸರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಏನಿದು ಯುಪಿ ಮಾದರಿ? :

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರ ಐದು ವರ್ಷಗಳ ಆಡಳಿತದ ಬಗ್ಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಯೋಗಿ  ಹಿಂದುತ್ವದ ಉಗ್ರ ಪ್ರತಿಪಾದಕರಾಗಿದ್ದರು. ಅವರು ಐದು ವರ್ಷಗಳಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಹಾಗೂ ಅವರಿಂದ ಬೇರೆ ಯಾವ ಬೇಡಿಕೆಗಳಿವೆ ಎಂದು ಫ‌ಲಾನುಭವಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವ ಮೂಲಕ  ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆಮನೆಗೆ ಭೇಟಿ :

ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅರ್ಹರಿಗೆ ಸುಲಭವಾಗಿ ತಲುಪಿಸಲಾಗಿದೆ. ಇದಕ್ಕಾಗಿ ಯಾರಿಗೂ ಲಂಚ ನೀಡಿಲ್ಲ ಹಾಗೂ ಫ‌ಲಾನುಭವಿಗಳು ಸರಕಾರಿ ಕಚೇರಿಗಳಿಗೆ ಅಲೆದಿಲ್ಲ. ಯೋಜನೆಗಳು ನೇರವಾಗಿ ಫ‌ಲಾನುಭವಿಗಳ ಮನೆಗೇ ತಲುಪಿದೆ. ಈ ಯೋಜನೆಗಳ ಫ‌ಲಾನುಭವಿಗಳು ಪ್ರತಿಯೊಂದು ಮನೆಯಲ್ಲೂ ಇದ್ದಾರೆ  ಎನ್ನುವುದು ಬಿಜೆಪಿ ಲೆಕ್ಕಾಚಾರ.

ಪ್ರಮುಖವಾಗಿ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ  ಮೂಲಕ  ಹಣವು ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆ  ವರ್ಗಾವಣೆಯಾಗುತ್ತಿದೆ. ಉಜ್ವಲ ಯೋಜನೆ ಮೂಲಕ ಉಚಿತ ಅಡುಗೆ ಅನಿಲ ವಿತರಣೆ, ಕೊರೊನಾ ಸಂದರ್ಭದಲ್ಲಿ  ಉಚಿತ ಆಹಾರ ಪದಾರ್ಥ ವಿತರಣೆ, ವೃದ್ಧಾಪ್ಯ, ವಿಧವಾ ವೇತನ ಹೆಚ್ಚಳ, ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ, ವಿವಿಧ ಯೋಜನೆಗಳಡಿಯಲ್ಲಿ  ಮನೆ ನಿರ್ಮಾಣ ಮುಂತಾದ  ಯೋಜನೆಗಳ ಫ‌ಲಾನುಭವಿಗಳನ್ನು ನೇರವಾಗಿ ಭೇಟಿ ಮಾಡುವ ಕಾರ್ಯ ಆರಂಭವಾಗಿದೆ.

ಸರಕಾರದ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ? ಅರ್ಹ ಫ‌ಲಾನುಭವಿಗಳಿದ್ದರೂ, ಯೋಜನೆಗಳು ತಲುಪುವಲ್ಲಿ ಆಗಿರುವ ಲೋಪಗಳೇನು ಎನ್ನುವುದನ್ನು ತಿಳಿದುಕೊಳ್ಳಲು  ಬಿಜೆಪಿಯ  ಪ್ರತಿ ಬೂತ್‌ ಮಟ್ಟದಲ್ಲಿರುವ ಪಕ್ಷದ ಪೇಜ್‌ ಪ್ರಮುಖರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಒಂದು ಪೇಜ್‌ಗೆ ಆರು  ಪ್ರಮುಖರು ಫ‌ಲಾನುಭವಿಗಳಿಗೆ ತಲುಪಿರುವ ಯೋಜನೆಗಳ ಮಾಹಿತಿ ಪಡೆಯುವುದರ ಜತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕೊಡುಗೆಗಳನ್ನು  ಮನವರಿಕೆ ಮಾಡಿಕೊಡುವ ಕೆಲಸ ಆರಂಭಿಸಿದ್ದಾರೆ. ಜತೆಗೆ ಅವರ ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ.  ಈಗಾಗಲೇ ರಾಜ್ಯದಲ್ಲಿ ಶೇ. 25ರಷ್ಟು  ಪೇಜ್‌ ಪ್ರಮುಖರು ಫ‌ಲಾನುಭವಿಗಳ ಮನೆಗಳನ್ನು ತಲುಪಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಂದ್ರ ಹಾಗೂ ರಾಜ್ಯ ಡಬಲ್‌ ಎಂಜಿನ್‌ ಸರಕಾರದ ಪ್ರಯೋಜನ ಪಡೆದಿರುವವರು ದೊಡ್ಡ ಪ್ರಮಾಣದಲ್ಲಿದ್ದಾರೆ. ಅವರೆಲ್ಲ  ಸೈಲೆಂಟ್‌ ಓಟರ್ಸ್‌. ಅವರು ಯಾವುದೇ ಸಮೀಕ್ಷೆಗಳ ವ್ಯಾಪ್ತಿಗೆ ಬರುವುದಿಲ್ಲ. ಅವರನ್ನು  ಹುಡುಕಿ ಅವರಿಗೆ ಬೇರೆ ಏನು ಬೇಕು ಎನ್ನುವುದನ್ನು ಕೇಳಿ ಒದಗಿಸುವ ಕೆಲಸ ಮಾಡಲಾಗುತ್ತಿದೆ. -ಎಂ.ಜಿ. ಮಹೇಶ್‌, ಬಿಜೆಪಿ ಮುಖ್ಯ ವಕ್ತಾರ

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.