ಸಿಎಂ, ಸ್ಪೀಕರ್ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Jul 21, 2019, 3:05 AM IST
ಬೆಂಗಳೂರು: ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ನೂ ವಿಶ್ವಾಸಮತ ಯಾಚಿಸುತ್ತಿಲ್ಲ. ಇದಕ್ಕೆ ಸ್ಪೀಕರ್ ರಮೇಶ್ ಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಶನಿವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯದಲ್ಲಿ ಕಾವೇರಿ ಉದ್ಯಾನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕೆಟ್ಟಿರುವ ಸ್ಪೀಕರ್ ಹಿಡಿದು “ಎಲ್ಲಿದೆಯೋ ನ್ಯಾಯ’ ಎಂಬ ಹಾಡನ್ನು ಹೇಳುವ ಮೂಲಕ ಮೈತ್ರಿ ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ವ್ಯಂಗ್ಯವಾಡಿದರು. ಮೈತ್ರಿ ಸರ್ಕಾರ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶಾಸಕರ ಬೆಂಬಲ ಇಲ್ಲ.
ಇದು ಈಗಾಗಲೇ ಸಾಬೀತಾಗಿದೆ. ಸಿಎಂ ಮೇಲೆ ವಿಶ್ವಾಸದ ಇಲ್ಲದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಸರ್ಕಾರಕ್ಕೆ ಬಹುಮತವಿಲ್ಲದಂತಾಗಿದೆ. ಆದರೂ, ಅಧಿಕಾರದಿಂದ ಕೆಳಗಿಳಿಯದೆ ಕಾಲಹರಣ ಮಾಡಲಾಗುತ್ತಿದೆ. ಇದಕ್ಕೆ ಸ್ಪೀಕರ್ ರಮೇಶ್ ಕುಮಾರ್ ಕೂಡ ಸಹಕರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಅಭದ್ರತೆಯ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜನರು ಸಮಸ್ಯೆಗಳ ಸುಳಿಗೆ ಸಿಲುಕಿ ಕಷ್ಟಪಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಬೇಕು. ಇಲ್ಲದಿದ್ದರೆ ಅ ಧಿಕಾರದಿಂದ ಕೆಳಗಿಳಿಯಬೇಕು.
ಆ ಮೂಲಕ ಸಂವಿಧಾನ ಉಳಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹುಬ್ಬಳ್ಳಿ, ರಾಯಚೂರು, ಕಲಬುರಗಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿ ರಾಜ್ಯದ ಇತರೆಡೆಯೂ ಬಿಜೆಪಿಯಿಂದ ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ