ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್.ಸಿ. ಮೋರ್ಚಾ ಪ್ರತಿಭಟನೆ


Team Udayavani, Nov 3, 2021, 1:00 PM IST

siddu 2

ಬೆಂಗಳೂರು : ‘ದಲಿತರು ಬಿಜೆಪಿಗೆ ಹೊಟ್ಟೆ ಪಾಡಿಗಾಗಿ ಹೋಗಿದ್ದಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ
ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಘಟಕದ ವತಿಯಿಂದ ಬುಧವಾರ ನಗರದ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ , ಶಾಸಕ ಪಿ ರಾಜೀವ್ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಕುಡಚಿ ಶಾಸಕ ರಾಜೀವ್ ಅವರು ಮಾತನಾಡಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿದರು. ”ಸಿದ್ದರಾಮಯ್ಯ ಹೇಳಿಕೆ ಕೇವಲ ರಾಜಕೀಯ ಹೇಳಿಕೆಯಲ್ಲ, ಅಂಬೇಡ್ಕರ್ ಕೊಟ್ಟ ಹಕ್ಕನ್ನು ಕಿತ್ತುಕೊಳ್ಳುವ ಹೇಳಿಕೆ. ದಲಿತರು ಹೊಟ್ಟೆಪಾಡಿಗಾಗಿ ಆಂದೋಲನ ‌ನಡೆಸುತ್ತಿದ್ದಾರೆ, ಸಿದ್ದರಾಮಯ್ಯ ಹೊಟ್ಟೆಪಾಡಿಗಾಗಿ ಜೆಡಿಎಸ್ ತೊರೆದಿದ್ದು, ಹೊಟ್ಟೆಪಾಡಿಗಾಗಿ ಕಾಂಗ್ರೆಸ್ ಸೇರಿದ್ದು. ಸಿದ್ದರಾಮಯ್ಯ ಹೇಳಿಕೆಯಿಂದ ದಲಿತ ಸಮುದಾಯಕ್ಕೆ ನೋವಾಗಿದೆ. ಸಿದ್ದರಾಮಯ್ಯ ಆದಷ್ಟು ಬೇಗ ಕ್ಷಮೆ ಕೇಳಬೇಕು. ಇಲ್ಲವಾದರೆ, ನಿಮ್ಮ ರಾಜಕೀಯ ಭವಿಷ್ಯಕ್ಕೆ ಒಳ್ಳೆಯದಲ್ಲ” ಎಂದರು.

ಅಶ್ವಥ್ ನಾರಾಯಣ ಕಿಡಿ
”ಸಿದ್ದರಾಮಯ್ಯನವರೆ ನಿಮ್ಮ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ ಹೇಳಿಕೆ.ಎಲ್ಲರಿಗೂ ಸ್ವಾತಂತ್ರ್ಯ ವಿದೆ ಯಾರು ಯಾವ ಪಕ್ಷಕ್ಕೆ ಬೇಕಾದರೂ ಹೊಗಬಹುದು.ನೀವು ಜೆಡಿಎಸ್ ನಿಂದ ಕಾಂಗ್ರೆಸ್‌ ಗೆ ಹೊಗಿಲ್ಲವೇ? ನಿಮ್ಮ ಬೇಜವಾಬ್ದಾರಿತನದಿಂದ ಚಾಮುಂಡೇಶ್ವರಿಯಲ್ಲಿ ನಿಮ್ಮನ್ನ ಸೋಲಿಸಿದರು” ಎಂದರು.

”ಪರಮೇಶ್ವರ್ ಅವರು ಸಿಎಂ ಆಗ್ತಾರೆ ಎಂದು ಸೋಲಿಸಿದ್ದು ಸಿದ್ದರಾಮಯ್ಯನವರು, ಅವರಿಗೆ ಪರಿಷತ್ ಸದಸ್ಯರನ್ನಾಗಿ ಮಾಡಿ ಡಿಸಿಎಂ ಕೊಡಲಿಲ್ಲ.ಮಲ್ಲಿಕಾರ್ಜುನ ಖರ್ಗೆ ಏನಾದರು? , ಮಹದೇವಪ್ಪ ನವರನ್ನ ಏನು ಮಾಡಿದಿರಿ ? ಪುಲಿಕೇಶಿ ನಗರದ ಅಖಂಡ ಶ್ರೀನಿವಾಸ ಮೂರ್ತಿಗೆ ಏನು ಮಾಡಿದಿರಿ ? ನಿಮ್ಮ ಜೊತೆ ಇದ್ದ ದಲಿತರನ್ನ, ಅಲ್ಪಸಂಖ್ಯಾತರನ್ನ ತುಳಿದು ನೀವು ಮೇಲೆ ಬಂದಿರಿ. ಮುಂದಿನ ದಿನಗಳಲ್ಲಿ ಚಾಮುಂಡೇಶ್ವರಿಯಲ್ಲಿ ಜನ ಕೊಟ್ಟ ತೀರ್ಪನ್ನ ಬಾದಾಮಿಯಲ್ಲಿ ಕೊಡುತ್ತಾರೆ. ಹಾನಗಲ್ ಗೆದ್ದಿದ್ದಕ್ಕೆ ತಲೆ ಮೇಲೆ ಏನೊ ಬಂದಂತೆ ಆಡ್ತಿದ್ದಾರೆ. ಸಿದ್ದರಾಮಯ್ಯ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ರಾಜ್ಯದ ದಲಿತ ಸಮುದಾಯ ನಿಮ್ಮ ವಿರುದ್ಧ ತೀವ್ರ ಹೋರಾಟ ಮಾಡಲಿದೆ” ಎಂದು ಬಿಜೆಪಿ ನಾಯಕ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.