ಜಾರ್ಜಿಗೊಂದು ಉತ್ಸವ, ಜಮೀರನಿಗೊಂದು ಉತ್ಸವ ಮಾಡಿಬಿಡಿ! ; ಬಿಜೆಪಿ ಲೇವಡಿ
ಡಿಕೆಶಿ ಅವರೇ ನೀವೆಷ್ಟು ಅಸಮರ್ಥರು... ಉತ್ಸವ ಮೂರ್ತಿ ಹೊರುವವರು ಯಾರು?
Team Udayavani, Jul 1, 2022, 4:48 PM IST
ಬೆಂಗಳೂರು: ಕಾಂಗ್ರೆಸ್ ವ್ಯಕ್ತಿ ಕೇಂದ್ರೀತ ಪಕ್ಷವಲ್ಲ, ಪಕ್ಷ ಕೇಂದ್ರೀತ ಎಂದು ಹೇಳಿಕೊಂಡೆ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ಇದೇನು ನಿಮ್ಮ ಉತ್ಸವಗಳು? ಎಲ್ಲರೂ ಉತ್ಸವ ಮೂರ್ತಿಗಳಾದರೆ, ಹೊರುವವರು ಯಾರು? ಎಂದು ಬಿಜೆಪಿ ಶುಕ್ರವಾರ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಕುಟುಕಿದೆ.
ಸಿದ್ದರಾಮೋತ್ಸವದ ಸುದ್ದಿ ಕೇಳಿದ್ದೇ ತಡ ಕಾಂಗ್ರೆಸ್ ಪಕ್ಷದಲ್ಲಿ ಉತ್ಸವದ ಚಟುವಟಿಕೆಗಳು ಗರಿಗೆದರಿವೆ. ಶಿವಕುಮಾರೋತ್ಸವ, ಖರ್ಗೆಯೋತ್ಸವ, ಪರಮೇಶ್ವರೋತ್ಸವ ಜೊತೆಗೆ ಜಾರ್ಜಿಗೊಂದು ಉತ್ಸವ, ಜಮೀರನಿಗೊಂದು ಉತ್ಸವ ಮಾಡಿಬಿಡಿ!. ಒಟ್ಟಾರೆ ಇದು ಕಾಂಗ್ರೆಸ್ ಹಾಸ್ಯೋತ್ಸವ ಅಲ್ಲದೆ ಮತ್ತೇನಲ್ಲ!, ಎಂದು ಅಣಕಿಸಿದೆ.
ರಾಜ್ಯ ನಾಯಕರ ಉತ್ಸವದ ಬಳಿಕ ಸೋನಿಯೋತ್ಸವ, ರಾಹುಲೋತ್ಸವ ಆಯೋಜಿಸುವ ಇರಾದೆಯಿದೆಯೇ? ಇದುವರೆಗೆ ಸುಳ್ಳಿನ ಉತ್ಸವ ಮಾಡಿದ ಕಾಂಗ್ರೆಸ್ ಈಗ ಹಾಸ್ಯೋತ್ಸವ ಕ್ಕೆ ಮುನ್ನುಡಿ ಬರೆಯುತ್ತಿದೆ. ಅಧಿಕಾರವಿಲ್ಲದೆ ಬೀದಿಗೆ ಬಿದ್ದಿರುವವರಿಗೆ ಈಗ ಭರಪೂರ ಮನೋರಂಜನೆ! ಎಂದು ಲೇವಡಿ ಮಾಡಿದೆ.
ರಾಜ್ಯದಲ್ಲಿ ಸ್ವಪ್ರತಿಷ್ಠೆಗಾಗಿ ಕೈ ನಾಯಕರ ಉತ್ಸವ ಸರಣಿ ಆರಂಭಗೊಳ್ಳುತ್ತಿದೆ. ಒಂದು ಕಡೆ ಪಕ್ಷದ ಪುನಶ್ಚೇತನಕ್ಕಾಗಿ ಭಾರತ ಜೋಡೋ ಯಾತ್ರೆ, ಇನ್ನೊಂದು ಕಡೆ ಸಿಎಂ ಅಭ್ಯರ್ಥಿಗಳ ವ್ಯಕ್ತಿ ಪೂಜೋತ್ಸವ! ಒಡೆದ ಮನೆಯಲ್ಲಿ ಎಷ್ಟು ಉತ್ಸವ ಮಾಡಿದರೇನು ಫಲ? ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆ ಬೇಡ, ಪಕ್ಷಪೂಜೆ ಮಾತ್ರ ನಡೆಯಲಿ ಎಂದು ಉಪದೇಶ ಮಾಡುತ್ತಿದ್ದ ಡಿ.ಕೇಶಿವಕುಮಾರ್ ಅವರೇ ದಾವಣಗೆರೆಯಲ್ಲಿ ನಡೆಯುತ್ತಿರುವುದೇನು? ಅದು ಸಿದ್ದರಾಮಯ್ಯ ಕೇಂದ್ರೀಕೃತ ವ್ಯಕ್ತಿಪೂಜೆಯಲ್ಲವೇ ಸಿದ್ದರಾಮೋತ್ಸವಕ್ಕೆ ನಿಮ್ಮ ದೇಣಿಗೆ ಏನು? ಎಂದು ಪ್ರಶ್ನಿಸಿದೆ.
ಸಿದ್ದರಾಮೋತ್ಸವದಲ್ಲಿ ಕಾಂಗ್ರೆಸ್ ಪಕ್ಷದ ಆಚಾರ, ವಿಚಾರಗಳ ಪ್ರಚಾರ ನಡೆಯುತ್ತದೆಯೋ ಅಥವಾ ಸಿದ್ದರಾಮಯ್ಯ ಆಚಾರ, ವಿಚಾರದ ಪ್ರಚಾರ ನಡೆಯುತ್ತದೆಯೋ?
ಸಿದ್ದರಾಮೋತ್ಸವದಲ್ಲಿ ಕಾಂಗ್ರೆಸ್ ಪಕ್ಷದ ಆಚಾರ, ವಿಚಾರಗಳ ಪ್ರಚಾರ ನಡೆಯುತ್ತದೆಯೋ ಅಥವಾ ಸಿದ್ದರಾಮಯ್ಯ ಆಚಾರ, ವಿಚಾರದ ಪ್ರಚಾರ ನಡೆಯುತ್ತದೆಯೋ?
ಸಿದ್ದರಾಮೋತ್ಸವದಲ್ಲಿ ಕಾಂಗ್ರೆಸ್ ಪಕ್ಷದ ಆಚಾರ, ವಿಚಾರಗಳ ಪ್ರಚಾರ ನಡೆಯುತ್ತದೆಯೋ ಅಥವಾ ಸಿದ್ದರಾಮಯ್ಯ ಆಚಾರ, ವಿಚಾರದ ಪ್ರಚಾರ ನಡೆಯುತ್ತದೆಯೋ? ಬಡಪಾಯಿಗಳಿಗೆ ನೋಟಿಸ್ ನೀಡುವ ಡಿಕೆಶಿ ಅವರೆಲ್ಲಿದ್ದಾರೆ ಈಗ? ಎಂದು ಕೆಣಕಿದೆ.
ಡಿಕೆಶಿ ಅವರೇ ನೀವೆಷ್ಟು ಅಸಮರ್ಥರು ಎಂದು ಈಗ ತಿಳಿಯುತ್ತಿದೆ.ಸಿದ್ದರಾಮಯ್ಯ ಅವರನ್ನು ಬಿಡಿ, ಅವರ ಪಟಾಲಂ ನಡೆಸುತ್ತಿರುವ ಪ್ರಚಾರದ ಅಬ್ಬರ ನಿಲ್ಲಿಸುವುದಕ್ಕೂ ನಿಮ್ಮಿಂದ ಸಾಧ್ಯವಾಗುತ್ತಿಲ್ಲ.ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ, ಸಿದ್ದರಾಮೋತ್ಸವದ ಪ್ರಚಾರ ಸಮಿತಿಗೆ ಗೌರವಾಧ್ಯಕ್ಷರಾಗಿ ಬಿಡಿ ಸಾಕು! ಎಂದು ಲೇವಡಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ