ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ
Team Udayavani, Oct 17, 2021, 1:04 PM IST
ಬೆಂಗಳೂರು: ಭ್ರಷ್ಟಾತಿ ಭ್ರಷ್ಟ ಎಂಎಂಕೆ! ಹಲವು ದಶಕಗಳಿಂದ ಕಲ್ಯಾಣ ಕರ್ನಾಟಕವನ್ನು ಲೂಟಿ ಮಾಡಿದ ಭ್ರಷ್ಟ ಕಾಂಗ್ರೆಸ್ಸಿಗನ ಸಂಕ್ಷಿಪ್ತ ಹೆಸರಿದು. ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತಿನ ಲೆಕ್ಕವನ್ನು ಜನರ ಮುಂದಿಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ? ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಕರ್ನಾಟಕ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಕುಟುಂಬದ ಹೆಸರಿನಲ್ಲಿ ದೇಶವನ್ನು ಕೊಳ್ಳೆ ಹೊಡೆದ ನಕಲಿ ಗಾಂಧಿ ಕುಟುಂಬದ ಆಸ್ತಿ ಎಷ್ಟೆಂದು ಯಾರಿಗಾದರೂ ಗೊತ್ತೇ? ಅದರಲ್ಲಿ ಬೇನಾಮಿ ಎಷ್ಟೆಂದು ಲೆಕ್ಕ ಹಾಕಿ ಹೇಳಲು ಸಾಧ್ಯವೇ ಕಾಂಗ್ರೆಸ್? ಕಾಂಗ್ರೆಸ್ ಮಾಡಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸೋನಿಯಾ ಗಾಂಧಿಯವರಿಗೆ ಪಾಲೆಷ್ಟು? ಎಂದು ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ ಎಂದಿದೆ.
ಇದನ್ನೂ ಓದಿ:ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್.ಎನ್.ನಾರಾಯಣಸ್ವಾಮಿ
ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಬಿಜೆಪಿ ಟೀಕಿಸಿದೆ.
ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ.
ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ.
ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು?#ಬುರುಡೆರಾಮಯ್ಯ
— BJP Karnataka (@BJP4Karnataka) October 17, 2021
ಸಿದ್ದರಾಮಯ್ಯನವರೇ, ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ. ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು ಎಂದು ಬಿಜೆಪಿ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ