ಮತದಾರರ ಎದುರು ಬಂಡೆ, ಹುಲಿಯಾ, ಟ್ರಬಲ್ ಶೂಟರ್ ಯಾವುದೂ ಇಲ್ಲ: ನಳಿನ್
Team Udayavani, Nov 10, 2020, 1:32 PM IST
ಮಂಗಳೂರು: ಮತದಾರರ ಎದುರು ಬಂಡೆ, ಹುಲಿಯಾ, ಟ್ರಬಲ್ ಶೂಟರ್ ಯಾವುದೂ ಇಲ್ಲ. ಅಹಂಕಾರ ಗೂಂಡಾಗಿರಿ ನಡೆಯುವುದಿಲ್ಲ ಎನ್ನುವುದನ್ನು ಉಪಚುನಾವಣೆ ಫಲಿತಾಂಶ ತೋರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಭಾಗವಹಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಉಪಚುನಾವಣೆ ಫಲಿತಾಂಶವು ಕಾರ್ಯಕರ್ತರು, ಮುಖಂಡರ ಒಗ್ಗಟ್ಟಿನ ಶ್ರಮದಿಂದ ಸಿಕ್ಕ ಗೆಲುವು. ಕಾಂಗ್ರೆಸ್ ನ ನಾಯಕರು ಅವರೇ ಹೇಳಿಕೊಂಡಂತಹ ಬಂಡೆ, ಹುಲಿಗಳು ಸೋತಿವೆ. ಸಾಮಾನ್ಯ ಕಾರ್ಯಕರ್ತರಿಗೆ ಜನ ಆಶೀರ್ವದಿಸಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ ಅಭಿವೃದ್ದಿ ಕೆಲಸಕ್ಕೆ ಜನ ಆಶೀರ್ವಾದ ನೀಡಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.