ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ?; ಬಿಜೆಪಿ ಟಾಂಗ್
Team Udayavani, Apr 28, 2022, 2:54 PM IST
ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಿದ್ದರಾಮಯ್ಯ ಹೇಳಿದಂತೆ ನಡೆಯುತ್ತಿದೆ. ಹಾಗಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. ಬುರುಡೆ ರಾಮಯ್ಯ ಅವರೇ, ಜಾಣ ಮೌನದ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಟಕ್ಕರ್ ನೀಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ. ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ಬಿಜೆಪಿ ಕಾಲೆಳೆದಿದೆ.
ಇದನ್ನೂ ಓದಿ:ರಾಷ್ಟ್ರ ಭಾಷೆ ವಿಚಾರದಲ್ಲಿ ಸುದೀಪ್ ಹೇಳಿರುವುದು ಸರಿಯಾಗಿದೆ: ಸಿಎಂ ಬೊಮ್ಮಾಯಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆಗೆ ಆರು ತಿಂಗಳ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಎಲ್ಲಿಯೂ ಈ ಬಗ್ಗೆ ಉಲ್ಲೇಖಿಸಿಲ್ಲ. ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸಿದ್ದರಾಮಯ್ಯ ನಿಯಂತ್ರಣದಲ್ಲಿದೆಯೇ ಅಥವಾ ಡಿಕೆಶಿ ಬೆದರಿದ್ದಾರೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ.
ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಹಾಗಾದರೆ @DKShivakumar
ಆಟಕ್ಕುಂಟು ಲೆಕ್ಕಕ್ಕಿಲ್ಲವೇ?#DKSvsSiddu— BJP Karnataka (@BJP4Karnataka) April 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ