BJP ಪರಿವರ್ತನಾ ಯಾತ್ರೆಗೆ ಚಾಲನೆ; ಸಿದ್ದು ಸರ್ಕಾರ ಕಿತ್ತೊಗೆಯಿರಿ: ಶಾ
Team Udayavani, Nov 2, 2017, 3:26 PM IST
ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಿದ್ದರಾಮಯ್ಯ ಸರ್ಕಾರ ಅತೀ ಭ್ರಷ್ಟ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ. ಕೆರೆಗಳನ್ನು ಬಿಲ್ಡರ್ ಗಳಿಗೆ ಮಾರುವ ಮೂಲಕವೂ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ನೀಡಿದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಗೊತ್ತಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೆರವು ನೀಡುತ್ತಿದೆ. ಅನುದಾನ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯ್ತು ಸಿದ್ದರಾಮಯ್ಯಜೀ ಎಂದು ಪ್ರಶ್ನಿಸಿದರು.
960 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೊಟ್ಟಿದ್ದೇವೆ. 4563 ಕೋಟಿ ರೂಪಾಯಿ ಅಮೃತ ಯೋಜನೆಗೆ ಕೊಟ್ಟಿದ್ದೇವೆ, ರೈಲ್ವೆ ಯೋಜನೆಗೆ 2197 ಕೋಟಿ ರೂಪಾಯಿ, 39000 ಕೋಟಿ ಮುದ್ರಾ ಯೋಜನೆಗೆ ಕೊಟ್ಟಿದ್ದೇವೆ.
ಸಿದ್ದರಾಮಯ್ಯನವರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ಮಾಡುವ ಬಗ್ಗೆ ಉತ್ಸಾಹವಿಲ್ಲ, ಆದರೆ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ನೆರವೇರಿಸಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ 19 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿದೆ. ದೇಶದ ರಕ್ಷಣೆ, ರಾಜ್ಯದ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯನವರಿಗೆ ಕಾಳಜಿ ಇಲ್ಲ ಎಂದರು.
ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಮೋದಿಜೀವರ ಜತೆ ಕೈ ಜೋಡಿಸಿ ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಶಾ ಈ ಸಂದರ್ಭದಲ್ಲಿ ಮನವಿ ಮಾಡಿದರು.
ಅಮಿತ್ ಶಾ ಅವರು ಆಗಮಿಸಿದ್ದಾಗ ಮೈಸೂರು ಪೇಟಾ ತೊಡಿಸಿ ಬರಮಾಡಿಕೊಳ್ಳಲಾಯಿತು. ಭಾಷಣದ ಆರಂಭದಲ್ಲೇ ಭಾವಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಂದು ಉಲ್ಲೇಖಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ ಶಾ ಅವರು ಸನ್ಮಾನಿಸಿ ಎತ್ತಿನಬಂಡಿಯ ಸ್ಮರಣಿಕೆಯನ್ನು ನೀಡಿದರು.
ಬಿಜೆಪಿ ಬಾವುಟ ಹಾರಿಸುವ ಮೂಲಕ ಯಾತ್ರೆಗೆ ಚಾಲನೆ:
ಬಿಜೆಪಿ ಬಾವುಟವನ್ನು ಹಾರಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ರಥಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. 224 ಕ್ಷೇತ್ರಕ್ಕೆ 74 ದಿನಗಳ ಕಾಲ ಪರಿವರ್ತನಾ ಯಾತ್ರೆ ನಡೆಯಲಿದೆ.
ಕಾರ್ಯಕ್ರಮ ವಿಳಂಬ:
ಜನರ ಕೊರತೆಯಿಂದಾಗಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2ಗಂಟೆಗಳ ಕಾಲ ವಿಳಂಬವಾಯಿತು.
ಶಾ ಭಾಷಣದ ನಡುವೆಯೇ ಎದ್ದು ಹೋದ ಕಾರ್ಯಕರ್ತರು:
ಅಮಿತ್ ಶಾ ಅವರ ಭಾಷಣದ ನಡುವೆಯೇ ಕಾರ್ಯಕರ್ತರು ತಂಡೋಪ ತಂಡವಾಗಿ ಎದ್ದು ಹೋದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ