ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ಟ್ವೀಟ್
Team Udayavani, Jan 27, 2020, 3:03 AM IST
ಬೆಂಗಳೂರು: ತಮ್ಮ ವಿರುದ್ಧ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿಯನ್ನು ಟ್ವೀಟ್ ಮೂಲಕ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕರ್ನಾಟಕ ಕುಮಾರಸ್ವಾಮಿ ಅವರಿಗೆ ಟ್ವೀಟ್ನಲ್ಲೇ ಉತ್ತರ ನೀಡಿದೆ.
“ಮುಖ್ಯಮಂತ್ರಿಯಾಗಿದ್ದಾಗ ಕಾರ್ಯಕರ್ತರಿಗೆ ಅಧಿಕಾರ ನೀಡದೇ, ಬಾಯಿಮಾತಿನಲ್ಲಿಯೇ ಮಿಣಿ ಮಿಣಿ ಪ್ರಪಂಚ ತೋರಿಸಿದ ಯುಗಪುರಷರಿಗೆ ಈಗ ಕಾರ್ಯಕರ್ತರ ನೆನಪಾಯಿತೋ?. ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧಿ ಒಕ್ಕಲಿಗರ ಓಟು ಪಡೆದು, ಅದೇ ಪಕ್ಷದೊಂದಿಗೆ ಹಿಂಬಾಗಿಲಿನಿಂದ ಅಧಿಕಾರ ಹಿಡಿದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೀನ್ ಯಾವುದು ಎಂದು ಸ್ಪಷ್ಟಪಡಿಸಿ’ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಕುಮಾರಸ್ವಾಮಿಗೆ ಖಡಕ್ ಉತ್ತರ ನೀಡಿದೆ.
ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು, ಸಮಾಜ ಒಡೆಯುವ ಕೆಲಸವನ್ನು ಎಚ್ಡಿಕೆ ಮಾಡುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. ಒಂದು ಸಮುದಾಯದ ನಾಯಕನನ್ನು ಟೀಕಿಸಲು ಅದೇ ಸಮುದಾಯ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿ ಸೋಂಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ್ದ ಟ್ವೀಟ್ಗೆ ಬಿಜೆಪಿ ಕರ್ನಾಟಕ “ನಿಮ್ಮ ಜೀನ್ ಯಾವುದು ಎಂದು ಸ್ಪಷ್ಟಪಡಿಸಿ’ ಎಂಬ ಖಡಕ್ ಮರುಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್