ಒಂದೆಡೆ ಹಿಂದುತ್ವ, ಮತ್ತೊಂದೆಡೆ ಒವೈಸಿ ಜತೆ BJP ಒಳಒಪ್ಪಂದ! ರೆಡ್ಡಿ
Team Udayavani, Jan 29, 2018, 12:51 PM IST
ಬೆಂಗಳೂರು: ಒಂದು ಕಡೆ ಹಿಂದುತ್ವದ ಪ್ರತಿಪಾದನೆ ಮಾಡುವ ಬಿಜೆಪಿ ಮತ್ತೊಂದೆಡೆ ಪಿಎಫ್ಐ, ಎಸ್ ಡಿಪಿಐ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಹೈದರಾಬಾದ್ ನಲ್ಲಿ ಬಿಜೆಪಿ ಮುಖಂಡರು ಅಸಾದುದ್ದೀನ್ ಓವೈಸಿ ಜೊತೆ ಗುಪ್ತ ಮಾತುಕತೆ ನಡೆಸಿರುವ ಬಗ್ಗೆ ಮಾಹಿತಿ ನನಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಧಿಕಾರ ಹಿಡಿಯಲು ಬಿಜೆಪಿಯವರು ಏನೂ ಬೇಕಾದರೂ ಮಾಡುತ್ತಾರೆ. ಉತ್ತರಪ್ರದೇಶದಲ್ಲಿಯೂ ಕೂಡಾ ಅವರು ಇದೇ ತಂತ್ರಗಾರಿಕೆ ಉಪಯೋಗಿಸಿ ಅಧಿಕಾರದ ಗದ್ದುಗೆ ಏರಿದ್ದಾರೆ ಎಂದು ದೂರಿದರು.
ಪಿಎಫ್ಐ, ಎಸ್ ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಲ್ಲ, ಅದು ಏನೇದ್ರೂ ಬಿಜೆಪಿಯವರ ಕೆಲಸ. ಈಗಾಗಲೇ ಕಳೆದ ಬಾರಿ ಪಂಚಾಯ್ತಿ ಎಲೆಕ್ಷನ್ ನಲ್ಲಿ ಬಿಜೆಪಿ ಓವೈಸಿ ಜತೆ ಹೊಂದಾಣಿಕೆ ಮಾಡಿಕೊಂಡಿತ್ತು,
ಈ ಬಾರಿ ಕರ್ನಾಟಕದ ಚುನಾವಣೆಯಲ್ಲಿಯೂ ಒವೈಸಿ ಜೊತೆ ಒಳಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಮುಸ್ಲಿಮರ ಮತ ವಿಭಜಿಸಲು ಬಿಜೆಪಿ ಈ ತಂತ್ರಗಾರಿಕೆ ಹೆಣೆದಿದೆ ಎಂದರು.
ಒವೈಸಿ ಜೊತೆ ಬಿಜೆಪಿ ಮುಖಂಡರು ರಹಸ್ಯ ಮಾತುಕತೆ ನಡೆಸಿದ್ದಾರೆ. ಹೊಂದಾಣಿಕೆಯ ದಾಖಲೆ ತೋರಿಸುತ್ತೇನೆ. ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಒಳಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ