ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು : ಸಿದ್ದೇಶ್ವರ


Team Udayavani, Mar 15, 2021, 7:33 PM IST

BNCVBNN

ದಾವಣಗೆರೆ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಒಳಗೊಂಡಂತೆ ಎಲ್ಲ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ನಿಮಿಷಾಂಬ ಕಲ್ಯಾಣ ಮಂಟಪದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಬಿಜೆಪಿ ಯುವ ಮೋರ್ಚಾದಿಂದ ಏರ್ಪಡಿಸಿದ್ದ ಯುವ ಸಮಾವೇಶ ಮತ್ತು ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ತುಂಬು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಅಧಿ  ಕಾರದಲ್ಲಿದೆ. ದಾವಣಗೆರೆ ದಕ್ಷಿಣದಲ್ಲಿ ಈವರೆಗೆ ಅ ಧಿಕಾರ ಹಿಡಿಯಲು ಆಗಿಲ್ಲ. ಮುಸ್ಲಿಂ ಮತಗಳು ಹೆಚ್ಚಾಗಿರುವ ಕಾರಣ ಮತಗಳು ಬಿಜೆಪಿಗೆ ಬೀಳುವುದಿಲ್ಲ ಎನ್ನಲಾಗುತ್ತದೆ. ದಕ್ಷಿಣ ಕ್ಷೇತ್ರದಲ್ಲಿ ರಸ್ತೆಗಳು ಆಗಿರುವುದು ಬಿಟ್ಟರೆ ಬೇರೆ ಏನು ಕೆಲಸ ಆಗಿಲ್ಲ. ಹಲವರಿಗೆ ಹಕ್ಕುಪತ್ರ, ಮನೆ, ಬಿಪಿಎಲ್‌ ಕಾರ್ಡ್‌ ದೊರೆತಿಲ್ಲ. ಯುವ ಮೋರ್ಚಾ ಕಾರ್ಯಕರ್ತರು ಜನರ ಮನಸ್ಸು ಗೆಲ್ಲಬೇಕು. ಸರ್ಕಾರದಿಂದ ನೀಡಲಾಗುವ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ದಾವಣಗೆರೆ ದಕ್ಷಿಣ ಕ್ಷೇತ್ರ ಗೆಲ್ಲುವುದು ಸಾಧ್ಯವಾಗುತ್ತದೆ. ಒಡಕು ಉಂಟಾದಲ್ಲಿ ಗೆಲುವು ಸಾಧ್ಯ ಇಲ್ಲ ಎಂದು ತಿಳಿದು ಒಗ್ಗಟ್ಟಾಗಿರಬೇಕು ಎಂದು ಸಲಹೆ ನೀಡಿದರು. ಮಹಾನಗರ ಪಾಲಿಕೆಯ 20, 22ನೇ ವಾರ್ಡ್ ಗಳಲ್ಲಿ ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ಕೊಟ್ಟರೂ ಸಹ ಕೆಲಸ ಮಾಡಬೇಕು. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಗೆಲ್ಲಲು ಶ್ರಮಿಸಬೇಕು. ಪಕ್ಷಕ್ಕೆ ದ್ರೋಹ ಮಾಡದೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ, ಬಿಜೆಪಿಯಲ್ಲಿನ ಯುವ ಶಕ್ತಿ ಪಕ್ಷಕ್ಕೆ ಆಧಾರ. ಅಧಿಕಾರದ ಜತೆ ಪಕ್ಷದ ಸಂಘಟನೆ ನಮ್ಮ ಮೂಲ ಗುರಿ ಆದಾಗ ಪಕ್ಷ ಬೆಳೆಯಲಿಕ್ಕೆ ಸಾಧ್ಯವಾಗುತ್ತದೆ. ಪಕ್ಷ ಸದೃಢವಾಗಿ ಬೆಳೆದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಯಶವಂತರಾವ್‌ ಜಾಧವ್‌ ಮಾತನಾಡಿ, ನಮ್ಮ ಪಕ್ಷ ಗಾಳಿಯಲ್ಲಿ ತೂರಿ ಬಂದಂತಹ ಪಕ್ಷ ಅಲ್ಲ. ಬಿಜೆಪಿಗೆ ತನ್ನದೇ ಇತಿಹಾಸವಿದೆ. 1988ರಲ್ಲಿ ಬಿಜೆಪಿ ಯಾವ ಸ್ಥಾನಗಳಿಸಿರಲಿಲ್ಲ. 1990ರಲ್ಲಿ ಎಲ್‌.ಕೆ.ಅಡ್ವಾಣಿ ಆರಂಭಿಸಿದ್ದ ರಾಮಯಾತ್ರೆ ದಾವಣಗೆರೆಗೆ ಬಂದಾಗ ವೆಂಕಟೇಶ್ವರ ವೃತ್ತದಲ್ಲಿ ನಡೆದ ಗಲಾಟೆಯಲ್ಲಿ 8 ಯುವಕರು ಬಲಿಯಾದರು. 72 ಜನ ಗಾಯಗೊಂಡಿದ್ದರು. ಎಲ್ಲದರ ಪರಿಣಾಮ ಜಿ. ಮಲ್ಲಿಕಾರ್ಜುನಪ್ಪ ಸಂಸದರಾಗಿ ಆಯ್ಕೆಯಾದರು. ಯುವಕರ ಶಕ್ತಿ, ಬಲದಿಂದ ಎಲ್ಲವೂ ಸಾಧ್ಯವಾಯಿತು ಎಂದು ಸ್ಮರಿಸಿದರು. ಮಹಾನಗರ  ಪಾಲಿಕೆಯ 20, 22ನೇ ವಾರ್ಡ್ ಗಳಲ್ಲಿ ಉಪಚುನಾವಣೆ ಅಭ್ಯರ್ಥಿಗಳು ಯಾರು ಎಂಬುದು ಕೋರ್‌ ಕಮಿಟಿಯಲ್ಲಿ ಎರಡು ದಿನಗಳಲ್ಲಿ ಪ್ರಕಟಗೊಳ್ಳಲಿದೆ. 19 ರಿಂದ ಪ್ರಚಾರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಜಗದೀಶ್‌, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ನಗರಪಾಲಿಕೆ ಸದಸ್ಯರಾದ ರಾಕೇಶ್‌ ಜಾಧವ್‌, ಎಲ್‌.ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್‌, ಮಾಜಿ ಸದಸ್ಯ ದೇವರಮನೆ ಶಿವಕುಮಾರ್‌, ಶ್ರೀನಿವಾಸ ದಾಸಕರಿಯಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್‌.ಎಲ್‌. ಶಿವಪ್ರಕಾಶ್‌, ಮಂಜುನಾಥ್‌ ಚಳ್ಳಕೆರೆ ಇತರರು ಇದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.