ಕ್ಷೇತ್ರಗಳಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರುವವರಿಗೆ ಬಿಜೆಪಿ “ಗಾಳ’
Team Udayavani, Jul 9, 2019, 3:03 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬದಲಿ ಸರ್ಕಾರ ರಚನೆಗೆ ಒಳಗಿಂದೊಳಗೇ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸುವ ವಿಚಾರದಲ್ಲಿ ಜಾಣ್ಮೆ ವಹಿಸಿದೆ.
ಸ್ವಂತ ಶಕ್ತಿ, ಸಾಮರ್ಥ್ಯದಿಂದ ಗೆಲ್ಲುವ ಶಾಸಕರನ್ನೇ ಗುರುತಿಸಿ ರಾಜೀನಾಮೆ ಕೊಡಿಸುತ್ತಿದೆ. ರಾಮಲಿಂಗಾರೆಡ್ಡಿ, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ, ಬಿ.ಸಿ.ಪಾಟೀಲ್, ರಮೇಶ್ ಜಾರಕಿಹೊಳಿ ಹೀಗೆ ಬಹುತೇಕ ತಮ್ಮ ಕ್ಷೇತ್ರಗಳಲ್ಲಿ ಒಳ್ಳೆಯ ಹೆಸರು ಇಟ್ಟುಕೊಂಡು ಜನಪ್ರಿಯತೆ ಹೊಂದಿರುವವರಿಗೆ ಗಾಳ ಹಾಕಿದೆ.
ಜೆಡಿಎಸ್ನಿಂದ ಮಹಾಲಕ್ಷ್ಮಿ ಲೇ ಔಟ್ ಶಾಸಕ ಗೋಪಾಲಯ್ಯ ಅವರಿಗೂ ಇದೇ ಮಾನದಂಡದಡಿ ರಾಜೀನಾಮೆ ಕೊಡಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದೊಮ್ಮೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಉಪ ಚುನಾವಣೆ ಎದುರಾದರೂ ಬಿಜೆಪಿಯ ಹೆಸರು, ಜತೆಗೆ ಕ್ಷೇತ್ರಗಳಲ್ಲಿ ಸ್ವಂತ ವರ್ಚಸ್ಸಿನಿಂದ ಗೆಲುವು ಸಾಧ್ಯವಾಗಬೇಕು ಎಂಬ ಉದ್ದೇಶ ಇದರ ಹಿಂದಿದೆ ಎನ್ನಲಾಗಿದೆ.
15 ಶಾಸಕರು ರಾಜೀನಾಮೆ ಕೊಟ್ಟು ಉಪ ಚುನಾವಣೆ ನಡೆದರೆ ಕನಿಷ್ಠ 10 ಶಾಸಕರಾದರೂ ಗೆಲ್ಲುವಂತಿರಬೇಕು ಎಂಬ ಕಾರಣಕ್ಕೆ ರಾಜೀನಾಮೆ ಕೊಡಿಸಲು ಆಯ್ಕೆ ಮಾಡುವಾಗಲೂ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ