BJP ಪ್ರಚಾರ ಬಿರುಸು, ಕಾಂಗ್ರೆಸ್ ನಾಯಕರು ಕಾಣೆ: ಅಶೋಕ್
Team Udayavani, Mar 17, 2024, 11:53 PM IST
ಬೆಂಗಳೂರು: ಬಿಜೆಪಿಯಿಂದ ಲೋಕಸಭಾ ಚುನಾವಣೆ ಪ್ರಚಾರ ಜೋರಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಮಾತ್ರ ನಾಪತ್ತೆಯಾಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಅಭ್ಯರ್ಥಿಗಳು ಕಚೇರಿ ತೆರೆದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೂ, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯೇ ಆಗಿಲ್ಲ. ಕಣಕ್ಕಿಳಿಯಲು ಮಂತ್ರಿಗಳು ಹೆದರುತ್ತಿದ್ದಾರೆ ಎಂದರು.
ರವಿವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿಸೂರ್ಯ ಕಚೇರಿ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಅವರ ಕಚೇರಿ ಉದ್ಘಾಟಿಸಲಾಗಿದೆ. ನಿನ್ನೆ ತುಮಕೂರು ಹಾಗೂ ದಾವಣಗೆರೆಯಲ್ಲಿ ಅಲ್ಲಿನ ಅಭ್ಯರ್ಥಿಗಳ ಕಚೇರಿಗಳನ್ನು ಆರಂಭಿಸಲಾಗಿದೆ. ಮೊದಲ ಸುತ್ತಿನ ಪ್ರಚಾರ ಕಾರ್ಯದಲ್ಲಿ ನಾವೇ ಮೊದಲ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.