ನ್ಯೂ ತರಗುಪೇಟೆ ಸ್ಫೋಟ ದುರಂತ: ಮೂವರ ಸಾವು, ಛಿದ್ರ ಛಿದ್ರವಾಗಿ ಬಿದ್ದ ದೇಹಗಳು!
Team Udayavani, Sep 23, 2021, 4:22 PM IST
ಬೆಂಗಳೂರು: ರಾಜ್ಯ ರಾಜಧಾನಿ ಒಂದೇ ವಾರದಲ್ಲಿ ಮತ್ತೊಂದು ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿದೆ. ನಗರದ ನ್ಯೂ ತರಗುಪೇಟೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಘಟನೆಯಲ್ಲಿ ಮೃತರಾದವರನ್ನು ಪಟಾಕಿ ಮಳಿಗೆ ನಡೆಸುತ್ತಿದ್ದ ಫಯಾಜ್ (50 ವ), ಟಾಟಾ ಏಸ್ ಚಾಲಕ ಮನೋಹರ್ (29) ಹಾಗೂ ಪಂಕ್ಚರ್ ಅಂಗಡಿ ಮಾಲಕ ಅಸ್ಲಂ (45) ಎಂದು ವರದಿ ತಿಳಿಸಿದೆ.
ಮನೋಹರ್ ಅವರು ಟಾಟಾ ಏಸ್ನಲ್ಲಿ ಪಟಾಕಿ ಬಾಕ್ಸ್ಗಳನ್ನು ತಂದಿದ್ದು, ಅದನ್ನು ಮಳಿಗೆಯೊಳಗೆ ಅನ್ಲೋಡ್ ಮಾಡಿದ್ದರು. ಮಾಲಕ ಫಯಾಜ್ ಜೊತೆ ಮಾತನಾಡುತ್ತ ನಿಂತಿದ್ದ ಸಂದರ್ಭದಲ್ಲಿ ಸ್ಪೋಟ ಸಂಭವಿಸಿದೆ. ಇಬ್ಬರೂ ಹಾರಿ ಹೊರಗೆ ಬಿದ್ದಿದ್ದಾರೆ. ಸ್ಪೋಟದ ಪರಿಣಾಮ ಅವರಿಬ್ಬರ ದೇಹಗಳು ಛಿದ್ರಗೊಂಡಿವೆ’ ಎಂದು ಪೊಲೀಸರು ತಿಳಿಸಿದರು.
ಇದನ್ನೂ ಓದಿ:‘RSS ಕ್ಯಾನ್ಸರ್ ಇದ್ದಂತೆ’ ಎಂದ ಜಾವೇದ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ
‘ಸ್ಫೋಟದ ತೀವ್ರತೆಗೆ ಪಟಾಕಿ ಮಳಿಗೆ ಪಕ್ಕದಲ್ಲಿದ್ದ ಪಂಕ್ಚರ್ ಮಳಿಗೆ ಹಾಗೂ ಚಹಾ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಟಾಟಾ ಏಸ್ ವಾಹನ ಹಾಗೂ 10 ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿವೆ. ಪಂಕ್ಚರ್ ಅಂಗಡಿಯಲ್ಲಿ ಕುಳಿತಿದ್ದ ಅಸ್ಲಂ ಸಹ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಫೋಟ ನಡೆದ ಸ್ಥಳಕ್ಕೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಭೇಟಿ ನೀಡಿದರು. ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ಪರಿಹಾರ ನೀಡುತ್ತೇನೆ. ಸ್ಫೋಟದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುತ್ತೇನೆ. ಸರ್ಕಾರ ಸಹ ಪರಿಹಾರ ನೀಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…