BMTC ಬಸ್ ಢಿಕ್ಕಿಯಾಗಿ ಇಬ್ಬರು ಪಿಯುಸಿ ವಿದ್ಯಾರ್ಥಿಗಳ ದಾರುಣ ಸಾವು
Team Udayavani, Dec 18, 2018, 11:10 AM IST
ಬೆಂಗಳೂರು: ಬಿಎಂಟಿಸಿ ಬಸ್ ಢಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.
ಕಸ್ತೂರ್ಬಾ ಬಸ್ ನಿಲ್ದಾಣದಲ್ಲಿ ಅವಘಡ ನಡೆದಿದ್ದು, ಯದುಕುಮಾರ್ ಎಸ್.ವೈ, ಚಂದ್ರಕಾಂತ್ ಎನ್ನುವ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ .ಇಬ್ಬರೂ ಪಿಯುಸಿ ವಿದ್ಯಾರ್ಥಿಗಳು.
ಕಾಲೇಜಿಗೆ ಹೋಗಲು ನಿಂತಿದ್ದಾಗ ಬಸ್ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದ್ದು , ಬಸ್ನ ಬ್ರೇಕ್ ಫೇಲ್ ಆಗಿದ್ದು ದುರಂತಕ್ಕೆ ಕಾರಣವಾಗಿದೆ.
ಇಬ್ಬರೂ ಕೂಲಿ ಕಾರ್ಮಿಕರ ಮಕ್ಕಳಾಗಿದ್ದು, ಮಕ್ಕಳ ನೇತ್ರದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಿಸಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ