ಬೆಳಗಾವಿ BMW ಅಪಘಾತ : ಬಿಜೆಪಿ ಶಾಸಕನ ಪುತ್ರನ ಬಂಧನ
Team Udayavani, Oct 9, 2018, 11:23 AM IST
ಬೆಳಗಾವಿ: ಇಲ್ಲಿನ ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಗೋವಾ ಬಿಜೆಪಿ ಶಾಸಕ ಗ್ಲೆನ್ ಶಿಕ್ಲಾನ್ ಅವರ ಪುತ್ರ ಕೈಲ್ ಟಿಕ್ಲೋನನ್ನು ಮಾಳಮಾರುತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕಾಕತಿ ಕಡೆ ಹೊರಟಿದ್ದ BMW ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಝಾದ ನಗರದ ಸೆಹನಿಯತ್ ವಾಹೀದ್ ಬಿಸಿª (18) ಎಂಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಸ್ನೇಹಿತೆ ಸಮ್ರಿàನ್ ಖಾಲೀದ್ ಬಿಸಿª (21) ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ
ದಾಖಲಿಸಲಾಗಿತ್ತು.
ಘಟನೆ ಬಳಿಕ ಉದ್ರಿಕ್ತಗೊಂಡ ಸಾರ್ವಜನಿಕರು ಕಾರಿಗೆ ಕಲ್ಲೆಸೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
ಉಜ್ವಲ ನಗರದಿಂದ ರಸ್ತೆ ದಾಟಿ ಆಝಾದ ನಗರಕ್ಕೆ ಒಟ್ಟು ನಾಲ್ವರು ಯುವತಿಯರು ಹೊರಟಿದ್ದರು. ಇಬ್ಬರು ಯುವತಿಯರು ರಸ್ತೆ ದಾಟಿ ಮುಂದಕ್ಕೆ ಹೋಗಿದ್ದರು. ಈ ಇಬ್ಬರು ಸಹೋದರಿಯರು ಹಿಂದೆ ಇದ್ದರು. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಆಗ ಕಾರಿನ ಚಕ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾಳೆ.
ಅಪಘಾತವಾಗುತ್ತಿದ್ದಂತೆ ಕೂಡಲೇ ಜಮಾಯಿಸಿದ ಸಾರ್ವಜನಿಕರು ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಹಿಂಭಾಗಕ್ಕೆ ಸ್ವಲ್ಪ ಪ್ರಮಾಣದಲ್ಲಿ ಬೆಂಕಿ ಹಚ್ಚಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಬೆಂಕಿ ನಂದಿಸಿದ್ದಾರೆ. ಬೆಂಕಿ ಹಚ್ಚಿದ ಕೆಲವರನ್ನು ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ರಾತ್ರಿ ಠಾಣೆಗೆ ಬಂದು ಶರಣಾಗಿದ್ದ ಕೈಲ್ ಟಿಕ್ಲೋ ತನ್ನ ಮೇಲಾದ ಹಲ್ಲೆಯ ಕುರಿತು ಪ್ರತಿ ದೂರನ್ನೂ ದಾಖಲಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ