ಕಂಬಿ ಹಿಂದಿನ ಕೈದಿಗಳ ಕೈಯಲ್ಲಿ ಪುಸ್ತಕ ಕ್ರಾಂತಿ!


Team Udayavani, Jan 24, 2019, 12:41 AM IST

parappa.jpg

ಬೆಂಗಳೂರು: ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಸೇರಿದ ಉಗ್ರರು, ಭೀಕರ ಕೊಲೆಗಳನ್ನು ಮಾಡಿದ ನಟೋರಿಯಸ್‌ ರೌಡಿಗಳು, ಡ್ರಗ್ಸ್‌ ಮಾಫಿಯಾ ಆಳಿದ ಕುಖ್ಯಾತರು ತಮ್ಮ ಅನುಭವ ಕಥನಗಳನ್ನು ಅಕ್ಷರ ರೂಪದಲ್ಲಿ ದಾಖಲಿಸಲಿದ್ದಾರೆ!

ಕೈದಿಗಳ ಕೈಗೆ ಲೇಖನಿ ನೀಡುವ ಇಂತಹದ್ದೊಂದು ವಿನೂತನ ಪ್ರಯತ್ನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ನಿರ್ಧರಿಸಿದೆ. ಜೈಲು ಕೈದಿಗಳಲ್ಲಿರುವ ಸಾಹಿತ್ಯದ ಅಭಿರುಚಿ ಗುರ್ತಿಸಿ, ಸ್ವತ: ಅವರಿಂದಲೇ ಅನುಭವ ಕಥನ ಬರೆಯಿಸಿ, ಅದಕ್ಕೆ ಪುಸ್ತಕ ರೂಪ ನೀಡುವ ಆಲೋಚನೆ ಪ್ರಾಧಿಕಾರಕ್ಕಿದೆ. ಈ ನಿಟ್ಟಿನಲ್ಲಿ ಕಾರಾಗೃಹ ಇಲಾಖೆಯೊಂದಿಗೆ ರೂಪುರೇಷೆ ಸಿದ್ಧಪಡಿಸುತ್ತಿದ್ದು, ಸದ್ಯದಲ್ಲೇ ಈ ಪ್ರಕ್ರಿಯೆ ಆರಂಭವಾಗಲಿದೆ.

ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಪ್ರಾಧಿಕಾರ ಈ ಹಿಂದೆ ‘ನಿಮ್ಮ ಮನೆಗೆ ನಮ್ಮ ಪುಸ್ತಕ ‘ಕಾರ್ಯಕ್ರಮ ಹಮ್ಮಿಕೊಂಡಿದ್ದಾಗ ಹಲವು ಕೈದಿಗಳು ಪಾಲ್ಗೊಂಡು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಮೈಸೂರು ಕೇಂದ್ರ ಕಾರಾಗೃಹದಲ್ಲೂ ಹಲವು ಕೈದಿಗಳು ಕನ್ನಡ ಸಾಹಿತ್ಯದಲ್ಲಿ ಎಂ.ಎ ಮತ್ತು ಬಿ.ಎ ಪದವಿ ಪಡೆದಿದ್ದು ಅವರಲ್ಲಿ ಹಲವರ ಕವಿತೆ ಮತ್ತು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ಪ್ರಾಧಿಕಾರದ ಅಧ್ಯಕ್ಷರ ಅನುಭವಕ್ಕೆ ಬಂದಿತ್ತು. ಕಲಬುರಗಿ ಕಾರಾಗೃಹ ಸೇರಿದಂತೆ ಹಲವು ಕಡೆಗಳಲ್ಲಿ ಕೈದಿಗಳ ಅನುಭವ ಕಥನ ಬರೆಸುವ ಬಗ್ಗೆ ಕೈದಿಗಳಿಂದ ಮತ್ತು ಅತಿಥಿಗಳಿಂದ ಸಲಹೆ ಬಂದಿತ್ತು.

ಈ ಬಗ್ಗೆ ಸಂಬಂಧ ಪಟ್ಟ ಹಿರಿಯ ಜೈಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಮುನ್ನುಡಿಗಾಗಿ ಸಾಹಿತಿಗಳಿಗೆ ಕರೆ!: ಕಲಬುರ್ಗಿ ಜೈಲಿನಲ್ಲಿರುವ ಕೆಲವು ಕೈದಿಗಳಿಗೆ ಪುಸ್ತಕ ಬರೆಯುವ ಅಭಿರುಚಿ ಇದೆ. ಈ ಹಿಂದೆ ಆ ಜೈಲಿನದ್ದ ಕೈದಿಯೊಬ್ಬ ಆ ಭಾಗದ ಸಾಹಿತಿಯೊಬ್ಬರಿಗೆ ಫೋನ್‌ ಕರೆ ಮಾಡಿ ತಮ್ಮ ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ವಿನಂತಿಸಿಕೊಂಡಿದ್ದ. ಆದರೆ ಅವರು ಯಾರೋ ಏನೋ, ಬರೆದು ಕೊಡೋಣ ಅಂತ ಹೇಳಿ ಸುಮ್ಮನಿದ್ದರು. ಇತ್ತೀಚೆಗಷ್ಟೇ ಪ್ರಾಧಿಕಾರ ‘ನಿಮ್ಮ ಮನಗೆ ನಮ್ಮ ಪುಸ್ತಕ’ ಕಾರ್ಯಕ್ರಮವನ್ನು ಕಲಬುರ್ಗಿ ಜೈಲಿನಲ್ಲಿ ಹಮ್ಮಿಕೊಂಡಿದ್ದಾಗ ಆ ಜೈಲಿನದ್ದ ಕೈದಿ ಸಮಾರಂಭದಲ್ಲಿ ಭಾಗವಹಿಸಿದ್ದ ಸಾಹಿತಿಗಳಿಗೆ ಫೋನ್‌ ಕರೆ ಮಾಡಿ ಮುನ್ನುಡಿಗೆ ಬೇಡಿಕೆ ಇಟ್ಟಿದ್ದನ್ನು ಮತ್ತೆ ನೆನಪಿಸಿದ. ಅದುವರೆಗೂ ಸಾಹಿತಿಗಳಿಗೆ ಆತ ಕೈದಿ ಎಂಬುವುದೇ ಗೊತ್ತಿರಲಿಲ್ಲ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದರು. ‘ನಾವು ಕಾರಾಗೃಹಗಳಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾಗ ಹಲವು ಕೈದಿಗಳು ವಚನ ಸಾಹಿತ್ಯ ಸೇರಿದಂತೆ ಸಾಹಿತ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಅತ್ಯುತ್ತಮವಾಗಿ ಮಾತನಾಡಿದರು. ಕೈದಿಗಳಲ್ಲೂ ಸಾಹಿತ್ಯದ ಅಭಿರುಚಿ ಇದೆ ಎಂಬುವುದು ಆಗ ಅರಿವಿಗೆ ಬಂತು. ಹೀಗಾಗಿಯೇ ಅವರಲ್ಲಿರುವ ಅನುಭವ ಕಥನಗಳನ್ನು ಬರೆಯಿಸಿ ಅವುಗಳಿಗೆ ಪುಸ್ತಕರೂಪ ನೀಡಲು ತೀರ್ಮಾನಿಸಲಾಗಿದೆ’ಎಂದು ತಿಳಿಸಿದ್ದಾರೆ.

ಜೈಲು ಕೈದಿಗಳಿಗೆ ಕಮ್ಮಟ: ಮೊದಲು ಪ್ರಾಧಿಕಾರ ಕೈದಿಗಳಿಗೆ ಕಥೆ, ಕವಿತೆ, ಲೇಖಕನ ಸೇರಿದಂತೆ ಸಾಹಿತ್ಯ ರಚನೆ ಸಂಬಂಧಿಸಿದಂತೆ ಕಥಾ ಕಮ್ಮಟವನ್ನು ಏರ್ಪಡಿಸಲಿದೆ. ಇಲ್ಲಿ ಸಾಹಿತ್ಯರಚನೆ ಸಂಬಂಧದ ಹಲವು ಆಯಾಮಗಳನ್ನು ಹೇಳಿ ಕೊಡಲಾಗುವುದು. ಬಳಿಕ ಆಯ್ದ ಕೈದಿಗಳಿಂದ ಮಾತ್ರ ಅನುಭವ ಕಥನ ದಾಖಲಿಸಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

30-50 ಕೈದಿಗಳಿಂದ ಅನುಭವ ಕಥನ ಬರೆಯಿ ಸುವ ಆಲೋಚನೆ ಪ್ರಾಧಿಕಾರದ ಮುಂದಿದ್ದು ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರ್ಗಿ ಸೇರಿ ಎಲ್ಲಾ ಜಿಲ್ಲೆಗಳಲ್ಲಿರುವ ಕೈದಿಗಳು ಕಮ್ಮಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. 

ಜೈಲು ಸೇರಿ ಲೇಖಕನಾಗಿ ಹೊರಬಂದ ಯಲ್ಲಪ್ಪ!

ಕ್ಷಣದ ಸಿಟ್ಟಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬರೋಬ್ಬರಿ 14 ವರ್ಷ 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ದೊಡ್ಡಬಳ್ಳಾಪುರದ ಟಿ. ಯಲ್ಲಪ್ಪ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಹಾಗೂ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. ಜತೆಗೆ, ಡಿಪ್ಲೋಮಾ ಇನ್‌ ಅಂಬೇಡ್ಕರ್‌ ಸ್ಟಡಿಸ್‌ ಕೋರ್ಸ್‌ ಕೂಡ ಪೂರೈಸಿದ್ದರು. ರಾಜ್ಯದ ಜೈಲುಗಳನ್ನು ಅಧ್ಯಯನ ಮಾಡಿದ ಅವರು, ಜೈಲು ವ್ಯವಸ್ಥೆ, ಜೈಲು ಜೀವನ, ಇತರೆ ಕೈದಿಗಳ ಅನುಭವಗಳನ್ನು ಒಟ್ಟುಗೂಡಿಸಿ ಬರೆದ ”ಜೈಲು ಜೀವಗಳು” ಜ.6ರಂದು ದೊಡ್ಡಬಳ್ಳಾಪುರದಲ್ಲಿ ಬಿಡುಗಡೆಗೊಂಡಿತ್ತು. ಕೈದಿಯೊಬ್ಬ ಪುಸ್ತಕ ಬರೆದು ಬಿಡುಗಡೆಗೊಂಡ ಮೊದಲ ಪುಸ್ತಕ ಇದಾಗಿದೆ.

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.