ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಆರು ರಾಜ್ಯಗಳ ವ್ಯಾಪ್ತಿಯಲ್ಲಿ ಬಂದೋಬಸ್ತ್ ಬಿಗಿ

Team Udayavani, Mar 27, 2023, 7:15 AM IST

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯನ್ನು “ಅಕ್ರಮ ಮುಕ್ತ’ ಮಾಡಲು ಚುನಾವಣಾ ಆಯೋಗ ಪಣತೊಟ್ಟಿದೆ. ಅದಕ್ಕಾಗಿ ರಾಜ್ಯದ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳ “ಜಾಲ’ ಹೆಣೆದಿದೆ.

ಯಾವ ಕ್ಷಣದಲ್ಲಾದರೂ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಅದರಂತೆ ಈಗಾಗಲೇ ಕಾರ್ಯರಂಗಕ್ಕಿಳಿದಿರುವ ಚುನಾವಣಾ ಆಯೋಗ ರಾಜ್ಯಾದ್ಯಂತ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರುವ ಹಾಗೂ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 19 ಜಿಲ್ಲೆಗಳಲ್ಲಿ ಗಡಿ ಭಾಗ ಹೊಂದಿರುವ ನೆರೆಯ ಆರು ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಬರೊಬ್ಬರಿ 171 ಚೆಕ್‌ಪೋಸ್ಟ್‌ಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಗೋವಾಗಳಿಂದ ಕರ್ನಾಟಕವನ್ನು ಪ್ರವೇಶಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ಗಡಿ ಭಾಗಗಳಲ್ಲಿ ಬರುವ ರಾಜ್ಯದ ಜಿಲ್ಲೆಗಳಲ್ಲಿ ಅಂತರರಾಜ್ಯ ಗಡಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳ ಸಂಚಾರ, ಅನುಮಾನಾಸ್ಪದ ಆಗಮನ-ನಿರ್ಗಮನಗಳ ಮೇಲೆ ಕಣ್ಣಿಡಲಾಗಿದೆ. ಅಂತರರಾಜ್ಯ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯಾಚರಣೆಗೆ ಸಹಕರಿಸುವಂತೆ ನೆರೆ ರಾಜ್ಯಗಳ ಪೊಲೀಸ್‌ ಹಾಗೂ ಇತರೆ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಪತ್ರ ವ್ಯವಹಾರ ನಡೆಸಿದ್ದಾರೆ.

ದಿನದ 24 ಗಂಟೆ ಕಾವಲು:
ಈಗಾಗಲೇ ಸ್ಥಾಪಿಸಲಾಗಿರುವ 171 ಅಂತರರಾಜ್ಯ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಪೊಲೀಸರು, ಕಂದಾಯ ಗುಪ್ತಚರ ನಿರ್ದೇಶನಾಲಯ, ರಾಜ್ಯ ಜಿಎಸ್‌ಟಿ ವಿಭಾಗ, ಕೇಂದ್ರ ಜಿಎಸ್‌ಟಿ ವಿಭಾಗ, ಕರಾವಳಿ ಕಾವಲು ಪಡೆ, ಇಡಿ, ಏರ್‌ಪೋರ್ಟ್‌, ಪರೋಕ್ಷ ತೆರಿಗೆ ಮತ್ತು ಸುಂಕ ಕೇಂದ್ರ ಮಂಡಳಿ (ಸಿಬಿಐಸಿ) ಸೇರಿದಂತೆ ಚುನಾವಣಾ ನೀತಿ ಸಂಹಿತೆ ಜಾರಿ ಸಂಸ್ಥೆಗಳು ಮತ್ತು ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ನಿಯೋಜಿಸಲಾಗಿದೆ. ಗಡಿ ಹೊಂದಿರುವ ರಾಜ್ಯದ ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಟವಿ ಕ್ಯಾಮರಾಗಳು ಅಳವಡಿಸಲಾಗಿದ, ವಿಶೇಷ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ದಿನ 24 ಗಂಟೆ ಕಾವಲು ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಗಿ ತಪಾಸಣೆ:
ಗಡಿ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರತಿ ದಿನ ಬರುವ ಸರ್ಕಾರಿ ವಾಹನಗಳ ಸಂಖ್ಯೆಯೆಷ್ಟು, ಖಾಸಗಿ ವಾಹನಗಳು, ಟೂರಿಸ್ಟ್‌ ವಾಹನಗಳ ಸಂಖ್ಯೆ ಎಷ್ಟು, ವಾಣಿಜ್ಯ ಸರಕು ಸಾಗಾಣಿಕೆ ವಾಹನಗಳು ಎಷ್ಟು, ಈ ಅವಧಿಯಲ್ಲಿ ಅದರಲ್ಲಿ ಹೆಚ್ಚಳ ಆಗಿದೆಯಾ ಎಂದು ಚೆಕ್‌ಪೋಸ್ಟ್‌ಗಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ರಾಜ್ಯ ಗ ಳಿಂದ ಬಂದು ಹೋಗು ವ ವರ ಸಂಖ್ಯೆ ಮೇಲೂ ನಿಗಾ ಇಡ ಲಾ ಗಿದೆ. ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರತಿ ದಿನ ಬರುವ ಅಗತ್ಯ ವಸ್ತುಗಳು, ಎಲೆಕ್ಟ್ರಾನಿಕ್‌ ಹಾಗೂ ಇತರೆ ಗೃಹ ಬಳಕೆ ಮತ್ತು ವಾಣಿಜ್ಯ ಸರಕುಗಳಲ್ಲಿ ಹೆಚ್ಚಳವಾಗಿದ್ದಲ್ಲಿ ಸೂಕ್ತ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಟ್ಟುನಿಟ್ಟಿನ ತಪಾಸಣೆ ನಡೆಸಿ ಚುನಾವಣಾ ಅಕ್ರಮಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.