ಇಬ್ಬರಿಗೆ ಷರತ್ತುಬದ್ಧ ಜಾಮೀನು ಮಂಜೂರು
Team Udayavani, Feb 6, 2019, 1:46 AM IST
ಬೆಂಗಳೂರು: 2016ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ನಾಗೇಂದ್ರ ಹಾಗೂ ತಿಮ್ಮೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿದ ನ್ಯಾ. ಬಿ.ಎ ಪಾಟೀಲ್ ಅವರಿದ್ದ ಏಕಸದಸ್ಯಪೀಠ, 2 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರ ಭದ್ರತಾ ಖಾತರಿ ಸಲ್ಲಿಸುವಂತೆ ಶರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶಿಸಿತು.
ಇಬ್ಬರೂ ಆರೋಪಿಗಳ ವಿರುದ್ಧ ಈ ಹಿಂದೆ ಯಾವುದೇ ಕೋಕಾ ಪ್ರಕರಣ ದಾಖಲಾಗಿಲ್ಲ ಮತ್ತು ಈ ಪ್ರಕರಣದಲ್ಲಿ ಈಗಾಗಲೇ ತನಿಖೆ ಮುಕ್ತಾಯಗೊಂಡಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾ ರೋಪಣೆ ಪಟ್ಟಿಯೂ ಸಲ್ಲಿಕೆಯಾಗಿದೆ ಎಂಬ ಅಂಶಗಳನ್ನು ಆಧರಿಸಿ ನ್ಯಾಯಪೀಠ ಜಾಮೀನು ನೀಡಿದೆ.
ದ್ವಿತೀಯ ಪಿ.ಯು ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಆರೋಪದಲ್ಲಿ 2016ರ ಡಿ.16ರಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ