ಬೂತ್ಮಟ್ಟದ ಮತಗಳ ಎಣಿಕೆ: ಪಿಐಎಲ್ ಸಲ್ಲಿಕೆ
Team Udayavani, May 23, 2018, 6:00 AM IST
ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟಿಸುವಾಗ ಅಭ್ಯರ್ಥಿಗಳು ಬೂತ್ ಮಟ್ಟದಲ್ಲಿ ಪಡೆದಿರುವ ಮತಗಳ ಸಂಖ್ಯೆಯನ್ನು ಪ್ರತ್ಯೇಕವಾಗಿ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿವರಾಮ ಗೋಪಾಲಕೃಷ್ಣ ಗಾಂವ್ಕರ್ ಎಂಬುವರು ಸಲ್ಲಿಸಿದ್ದ ಪಿಐಎಲ್ನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ಎ.ಎಸ್ ಬೋಪಣ್ಣ ಹಾಗೂ ನ್ಯಾ.ಆರ್.ದೇವದಾಸ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠ, ಪ್ರತಿವಾದಿಗಳಾದ
ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಕೇಂದ್ರ ಕಾನೂನು ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ
ಮುಂದೂಡಿತು. ಎವಿಎಂ ಮತ ಎಣಿಕೆ ಮಾಡಿದ ಬಳಿಕ ಆಯೋಗ, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಆಯಾ ಬೂತ್ಮಟ್ಟದಲ್ಲಿ ಪಡೆದ ಮತಗಳ ಸಂಖ್ಯೆಯನ್ನು ಪ್ರಕಟಗೊಳಿಸಲಾಗುತ್ತಿದೆ. ಇದರಿಂದಾಗಿ ಕಡಿಮೆ ಮತ ಪಡೆದಿರುವ ಬೂತ್ನ ಪ್ರದೇಶವನ್ನು ಆಯ್ಕೆಯಾಗಿರುವ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಕಡೆಗಣಿಸಬಹುದು. ಹೀಗಾಗಿ, ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಾಗಿ 100 ಇವಿಎಂ ಯಂತ್ರಗಳಲ್ಲಿ ದಾಖಲಾದ ಮತಗಳ ಸಂಖ್ಯೆಯನ್ನು ಒಟ್ಟಾಗಿ ಪ್ರಕಟಿಸಬೇಕು ಎಂದು ಕೇಂದ್ರ ಕಾನೂನು ಆಯೋಗ ಮಾಡಿದ್ದ ಶಿಫಾರಸ್ಸನ್ನು ಆಯೋಗ ಜಾರಿಗೊಳಿಸಬೇಕು. ಮುಂಬರುವ ಲೋಕಸಭೆ ಇನ್ನಿತರ ಚುನಾವಣೆಗಳಲ್ಲಿ ಬೂತ್ಮಟ್ಟದ ಮತಗಳನ್ನು ಪ್ರತ್ಯೇಕವಾಗಿ ಪ್ರಕಟಿಸದಂತೆ ನಿರ್ದೇಶಿಸಬೇಕು ಎಂದು ಅವರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು